<p><strong>ದಾವಣಗೆರೆ: </strong>ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರಿಗೆ ಇಲ್ಲಿನ ದಕ್ಷಿಣ ಸಂಚಾರ ಠಾಣೆ ಪೊಲೀಸರು ಯಮ ಕಿಂಕರರ ವೇಷ ಧರಿಸಿ ವಿಶಿಷ್ಟ ರೀತಿಯಲ್ಲಿ ಸಂಚಾರಿ ನಿಯಮಗಳ ಜಾಗೃತಿ ಮೂಡಿಸಿದರು.</p>.<p>ಇಲ್ಲಿನ ಜಯದೇವ ವೃತ್ತದಲ್ಲಿ ಹೆಲ್ಮೆಟ್ ಧರಿಸದೇ ಬಂದ ಸವಾರರ ಕುತ್ತಿಗೆಗೆ ಹಗ್ಗ ಹಾಕುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಯಮ ನಿಮ್ಮ ಹಿಂದೆಯೇ ಬರುತ್ತಾನೆ ಎಂಬ ಎಚ್ಚರಿಕೆಯನ್ನೂ ಕೊಟ್ಟರು.</p>.<p>ಯಮ ವೇಷಧಾರಿ ಕುತ್ತಿಗೆಗೆ ಹಗ್ಗ ಹಾಕಿ ‘ಎಲವೋ ಮಾನವ ನಿನ್ನನ್ನು ನಂಬಿಕೊಂಡು ಹೆಂಡತಿ, ಮಕ್ಕಳು ಜೀವನ ಸಾಗಿಸುತ್ತಿದ್ದಾರೆ. ನೀನು ಸತ್ತರೆ ಅವರು ಜೀವನ ಹೇಗೆ ಮಾಡಬೇಕು ಎಂಬುದನ್ನು ಯೋಚಿಸು’ ಎಂದು ತಿಳಿವಳಿಕೆ ನೀಡಿದರು. ಅಲ್ಲದೇ ದಂಡವನ್ನು ವಿಧಿಸಿದರು.</p>.<p>ವೃತ್ತದಲ್ಲಿ ಬರುತ್ತಿದ್ದ ಬಸ್ ಹತ್ತಿದ ವೇಷಧಾರಿಗಳು ಚಾಲಕನ ಕುತ್ತಿಗೆಗೆ ಹಗ್ಗ ಹಾಕಿ ‘ನಿನ್ನ ಲೈಸೆನ್ಸ್ ಎಲ್ಲಿ, ಇಲ್ಲಿರುವ ಪ್ರಮಾಣಿಕರು ನಿನ್ನನ್ನು ನಂಬಿ ಬರುತ್ತಿದ್ದು, ಮದ್ಯಪಾನ ಮಾಡಿ ಚಾಲನೆ ಮಾಡಬೇಡ, ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಬಸ್ನಲ್ಲಿ ಕೂರಿಸಿಕೊಳ್ಳಬೇಡ’ ಎಂದು ಕಿವಿಮಾತು ಹೇಳಿದರು.</p>.<p>ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ದಾವಣಗೆರೆ ದಕ್ಷಿಣ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ ಅರ್ಜುನ್ ಲಿಂಗಾರೆಡ್ಡಿ ಹಾಗೂ ಜಯಶೀಲಾ ಅವರ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಯಮನ ವೇಷಧಾರಿಯಾಗಿ ಕಾನ್ಸ್ಟೆಬಲ್ಗಳಾದ ರಾಮಾಂಜನೇಯ, ಕಿಂಕರನಾಗಿ ಹರೀಶನಾಯ್ಕ, ಚಿತ್ರಗುಪ್ತನಾಗಿ ಮಂಜುನಾಥ್ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರಿಗೆ ಇಲ್ಲಿನ ದಕ್ಷಿಣ ಸಂಚಾರ ಠಾಣೆ ಪೊಲೀಸರು ಯಮ ಕಿಂಕರರ ವೇಷ ಧರಿಸಿ ವಿಶಿಷ್ಟ ರೀತಿಯಲ್ಲಿ ಸಂಚಾರಿ ನಿಯಮಗಳ ಜಾಗೃತಿ ಮೂಡಿಸಿದರು.</p>.<p>ಇಲ್ಲಿನ ಜಯದೇವ ವೃತ್ತದಲ್ಲಿ ಹೆಲ್ಮೆಟ್ ಧರಿಸದೇ ಬಂದ ಸವಾರರ ಕುತ್ತಿಗೆಗೆ ಹಗ್ಗ ಹಾಕುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಯಮ ನಿಮ್ಮ ಹಿಂದೆಯೇ ಬರುತ್ತಾನೆ ಎಂಬ ಎಚ್ಚರಿಕೆಯನ್ನೂ ಕೊಟ್ಟರು.</p>.<p>ಯಮ ವೇಷಧಾರಿ ಕುತ್ತಿಗೆಗೆ ಹಗ್ಗ ಹಾಕಿ ‘ಎಲವೋ ಮಾನವ ನಿನ್ನನ್ನು ನಂಬಿಕೊಂಡು ಹೆಂಡತಿ, ಮಕ್ಕಳು ಜೀವನ ಸಾಗಿಸುತ್ತಿದ್ದಾರೆ. ನೀನು ಸತ್ತರೆ ಅವರು ಜೀವನ ಹೇಗೆ ಮಾಡಬೇಕು ಎಂಬುದನ್ನು ಯೋಚಿಸು’ ಎಂದು ತಿಳಿವಳಿಕೆ ನೀಡಿದರು. ಅಲ್ಲದೇ ದಂಡವನ್ನು ವಿಧಿಸಿದರು.</p>.<p>ವೃತ್ತದಲ್ಲಿ ಬರುತ್ತಿದ್ದ ಬಸ್ ಹತ್ತಿದ ವೇಷಧಾರಿಗಳು ಚಾಲಕನ ಕುತ್ತಿಗೆಗೆ ಹಗ್ಗ ಹಾಕಿ ‘ನಿನ್ನ ಲೈಸೆನ್ಸ್ ಎಲ್ಲಿ, ಇಲ್ಲಿರುವ ಪ್ರಮಾಣಿಕರು ನಿನ್ನನ್ನು ನಂಬಿ ಬರುತ್ತಿದ್ದು, ಮದ್ಯಪಾನ ಮಾಡಿ ಚಾಲನೆ ಮಾಡಬೇಡ, ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಬಸ್ನಲ್ಲಿ ಕೂರಿಸಿಕೊಳ್ಳಬೇಡ’ ಎಂದು ಕಿವಿಮಾತು ಹೇಳಿದರು.</p>.<p>ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ದಾವಣಗೆರೆ ದಕ್ಷಿಣ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ ಅರ್ಜುನ್ ಲಿಂಗಾರೆಡ್ಡಿ ಹಾಗೂ ಜಯಶೀಲಾ ಅವರ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಯಮನ ವೇಷಧಾರಿಯಾಗಿ ಕಾನ್ಸ್ಟೆಬಲ್ಗಳಾದ ರಾಮಾಂಜನೇಯ, ಕಿಂಕರನಾಗಿ ಹರೀಶನಾಯ್ಕ, ಚಿತ್ರಗುಪ್ತನಾಗಿ ಮಂಜುನಾಥ್ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>