ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರಿಂದ ಹಣ ವಸೂಲಿ ಮಾಡಿ ರಸೀದಿ ನೀಡದೆ ಜೇಬಿಗಿಳಿಸಿದ ವಿಡಿಯೊ ಹರಿದಾಡಿದ್ದು, ಅದರ ಆಧಾರದಲ್ಲಿ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಜಯಣ್ಣ ಮತ್ತು ಹೆಡ್ಕಾನ್ಸ್ಟೆಬಲ್ ರವಿ ಎಂಬಿಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.