<p><strong>ದಾವಣಗೆರೆ: </strong>ಕೊರೊನಾ ವಾರಿಯರ್ಸ್ಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಹಾಗೂ ನರ್ಸ್ಗಳಿಗೂ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಂದರ್ಭ ನೀರು ಹಾಗೂ ಜ್ಯೂಸ್ ಕುಡಿಯುವ ಸಂದರ್ಭ ಸೋಂಕು ಹರಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ. ಮಾಹಿತಿ ಕೊರತೆಯಿಂದ ರೋಗ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಿಪಿಇ ಕಿಟ್ ಧರಿಸುವ ಮತ್ತು ತೆಗೆದು ಹಾಕುವ ಬಗ್ಗೆ ತರಬೇತಿ ನೀಡಲಾಗುವುದು’ ಎಂದು ಹೇಳಿದರು.</p>.<p>‘ಸೋಂಕು ದೃಢಪಟ್ಟಿರುವ ವೈದ್ಯರು ಹಾಗೂ ನರ್ಸ್ಗಳನ್ನು ಐಸೋಲೇಷನ್ ವಾರ್ಡ್ನಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದ್ದು, ಒಂದು ವಾರದಲ್ಲಿ ಗುಣಮುಖರನ್ನಾಗಿ ಮಾಡಿ, ನಂತರ ಅವರನ್ನು ಕರ್ತವ್ಯಕ್ಕೆ ಬಳಸಿಕೊಳ್ಳುತ್ತೇವೆ’ ಎಂದರು.</p>.<p>ದೇವಾಲಯಗಳಿಗೆ ಆರಂಭದ ಬಗ್ಗೆ ಉತ್ತರಿಸಿದ ಅವರು, ‘ಎಲ್ಲವನ್ನೂ ಪರಿಗಣಿಸಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಿ ಮಾಸ್ಕ್ ಧರಿಸಿ ಬದುಕಬೇಕಾಗಿದೆ’ ಎಂದರು.</p>.<p>ಹೊರಗಡೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗುವುದು. ಅವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಹಿಸಲಾಗುವುದು. ಅದಕ್ಕಾಗಿಯೇ ಅದಕ್ಕಾಗಿಯೇ ಒಂದು ತಂಡ ಕೆಲಸ ಮಾಡುತ್ತಿದೆ. ಜಾಲಿನಗರದಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನಲ್ಲದೇ ರ್ಯಾಂಡಮ್ ಆಗಿ ಟೆಸ್ಟ್ ಮಾಡಿದ್ದೇವೆ. ಅದಕ್ಕಾಗಿಯೇ ಅಲ್ಲಿ 9 ತಂಡಗಳು ಕೆಲಸ ಮಾಡುತ್ತಿವೆ. ದುರ್ಬಲರು, ತೀವ್ರ ಉಸಿರಾಟದ ತೊಂದರೆ ಇರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೊರೊನಾ ಕೊಂಡಿ ತುಂಡರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೊರೊನಾ ವಾರಿಯರ್ಸ್ಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಹಾಗೂ ನರ್ಸ್ಗಳಿಗೂ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಂದರ್ಭ ನೀರು ಹಾಗೂ ಜ್ಯೂಸ್ ಕುಡಿಯುವ ಸಂದರ್ಭ ಸೋಂಕು ಹರಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ. ಮಾಹಿತಿ ಕೊರತೆಯಿಂದ ರೋಗ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಿಪಿಇ ಕಿಟ್ ಧರಿಸುವ ಮತ್ತು ತೆಗೆದು ಹಾಕುವ ಬಗ್ಗೆ ತರಬೇತಿ ನೀಡಲಾಗುವುದು’ ಎಂದು ಹೇಳಿದರು.</p>.<p>‘ಸೋಂಕು ದೃಢಪಟ್ಟಿರುವ ವೈದ್ಯರು ಹಾಗೂ ನರ್ಸ್ಗಳನ್ನು ಐಸೋಲೇಷನ್ ವಾರ್ಡ್ನಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದ್ದು, ಒಂದು ವಾರದಲ್ಲಿ ಗುಣಮುಖರನ್ನಾಗಿ ಮಾಡಿ, ನಂತರ ಅವರನ್ನು ಕರ್ತವ್ಯಕ್ಕೆ ಬಳಸಿಕೊಳ್ಳುತ್ತೇವೆ’ ಎಂದರು.</p>.<p>ದೇವಾಲಯಗಳಿಗೆ ಆರಂಭದ ಬಗ್ಗೆ ಉತ್ತರಿಸಿದ ಅವರು, ‘ಎಲ್ಲವನ್ನೂ ಪರಿಗಣಿಸಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಬಳಸಿ ಮಾಸ್ಕ್ ಧರಿಸಿ ಬದುಕಬೇಕಾಗಿದೆ’ ಎಂದರು.</p>.<p>ಹೊರಗಡೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗುವುದು. ಅವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಹಿಸಲಾಗುವುದು. ಅದಕ್ಕಾಗಿಯೇ ಅದಕ್ಕಾಗಿಯೇ ಒಂದು ತಂಡ ಕೆಲಸ ಮಾಡುತ್ತಿದೆ. ಜಾಲಿನಗರದಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನಲ್ಲದೇ ರ್ಯಾಂಡಮ್ ಆಗಿ ಟೆಸ್ಟ್ ಮಾಡಿದ್ದೇವೆ. ಅದಕ್ಕಾಗಿಯೇ ಅಲ್ಲಿ 9 ತಂಡಗಳು ಕೆಲಸ ಮಾಡುತ್ತಿವೆ. ದುರ್ಬಲರು, ತೀವ್ರ ಉಸಿರಾಟದ ತೊಂದರೆ ಇರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೊರೊನಾ ಕೊಂಡಿ ತುಂಡರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>