‘ಬಿಎಸ್ವೈ ವಿರುದ್ಧ ಯಾರು ದೂರು ಕೊಟ್ಟಿಲ್ಲ.ಎಲ್ಲ ಶಾಸಕರು ಒಂದಾಗಿದ್ದೇವೆ. ಬಿಎಸ್ವೈ ತಂದೆ ಇದ್ದ ಹಾಗೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರಿಗೆ ಹನ್ನೊಂದು ಶಾಸಕರು ದೂರು ನೀಡಿದ್ದು ಸುಳ್ಳು.ಇದು ಕೇವಲ ಮಾಧ್ಯಮಗಳ ಸೃಷ್ಟಿ.ಆಡಳಿತದಲ್ಲಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ ಇಲ್ಲ.ವಿಜಯೇಂದ್ರ ಒಬ್ಬ ಯುವ ಮುಖಂಡ.ರಾಜ್ಯ ಪ್ರವಾಸ ಮಾಡುತ್ತಾರೆ. ಪಕ್ಷ ಸಂಘಟನೆ ಮಾಡುತ್ತಾರೆ.ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದು ತಪ್ಪು.ಯಾವುದೇ ಇಲಾಖೆ ಅಥವಾ ಶಾಸಕರ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.ನನಗೆ ಕೆಲಸವಿದ್ದರೂ ನಾನೂ ಅವರ ಬಳಿ ಹೋಗುತ್ತೇನೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ’ ಎಂದು ಹೇಳಿದರು.