<p><strong>ದಾವಣಗೆರೆ:</strong> 6ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದೆ. ತಿಂಗಳ ಎರಡನೇ ಶನಿವಾರ, ಯುಗಾದಿ ಹಬ್ಬದ ಪ್ರಯಕ್ತ ಹೊರಗಿನಿಂದ ಪ್ರಯಾಣಿಕರು ದಾವಣಗೆರೆ ಬರುತ್ತಿದ್ದರು.</p>.<p>ದಾವಣಗೆರೆಯಿಂದ ಹರಿಹರ, ರಾಣೆಬೆನ್ನೂರು ಹಾಗೂ ಚಿತ್ರದುರ್ಗ ಮಾರ್ಗವಾಗಿ 21 ಟ್ರಿಪ್ಗಳು ಸಂಚರಿಸಿದವು. ದೂರದ ಊರುಗಳಿಗೆ ಪ್ರಯಾಣಿಕರು ಹೆಚ್ಚಾಗಿ ಖಾಸಗಿ ಬಸ್ಗಳನ್ನೇ ಅವಲಂಬಿಸಿದ್ದರು.</p>.<p class="Subhead"><strong>ಐದು ಮಂದಿ ವರ್ಗಾವಣೆ:</strong></p>.<p>‘ಶನಿವಾರ ಮತ್ತೆ 5 ನೌಕರರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರಲ್ಲಿ ಮೂರು ಮಂದಿ ತಾಂತ್ರಿಕ ಸಿಬ್ಬಂದಿ ಇದ್ದಾರೆ.ಶುಕ್ರವಾರ 14 ಮಂದಿ ನೌಕರರನ್ನು ವರ್ಗಾವಣೆ ಮಾಡಲಾಗಿತ್ತು. ಒಟ್ಟು 19 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ಹೇಳಿದರು.</p>.<p>‘ಮುಷ್ಕರದ ನಿಮಿತ್ತ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗಕ್ಕೆ 4 ದಿನಗಳಿಂದ ₹1.40 ಕೋಟಿ ನಷ್ಟವಾಗಿದೆ’ ಎಂದು ಹೇಳಿದರು.</p>.<p class="Subhead"><strong>ಕುಟುಂಬ ಸಮೇತ ಪ್ರತಿಭಟನೆ:</strong>6ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಏಪ್ರಿಲ್ 12ರಂದು ಕುಟುಂಬದವರ ಜೊತೆ ಪ್ರತಿಭಟನೆ ನಡೆಸಲಿದ್ದಾರೆ.</p>.<p>‘ಬಸ್ ನಿಲ್ದಾಣ ಹಾಗೂ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೋವಿಡ್ ಕಾರಣದಿಂದಾಗಿ ಕಾರಣದಿಂದ 50ರಿಂದ 60 ಜನ ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು’ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> 6ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದೆ. ತಿಂಗಳ ಎರಡನೇ ಶನಿವಾರ, ಯುಗಾದಿ ಹಬ್ಬದ ಪ್ರಯಕ್ತ ಹೊರಗಿನಿಂದ ಪ್ರಯಾಣಿಕರು ದಾವಣಗೆರೆ ಬರುತ್ತಿದ್ದರು.</p>.<p>ದಾವಣಗೆರೆಯಿಂದ ಹರಿಹರ, ರಾಣೆಬೆನ್ನೂರು ಹಾಗೂ ಚಿತ್ರದುರ್ಗ ಮಾರ್ಗವಾಗಿ 21 ಟ್ರಿಪ್ಗಳು ಸಂಚರಿಸಿದವು. ದೂರದ ಊರುಗಳಿಗೆ ಪ್ರಯಾಣಿಕರು ಹೆಚ್ಚಾಗಿ ಖಾಸಗಿ ಬಸ್ಗಳನ್ನೇ ಅವಲಂಬಿಸಿದ್ದರು.</p>.<p class="Subhead"><strong>ಐದು ಮಂದಿ ವರ್ಗಾವಣೆ:</strong></p>.<p>‘ಶನಿವಾರ ಮತ್ತೆ 5 ನೌಕರರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರಲ್ಲಿ ಮೂರು ಮಂದಿ ತಾಂತ್ರಿಕ ಸಿಬ್ಬಂದಿ ಇದ್ದಾರೆ.ಶುಕ್ರವಾರ 14 ಮಂದಿ ನೌಕರರನ್ನು ವರ್ಗಾವಣೆ ಮಾಡಲಾಗಿತ್ತು. ಒಟ್ಟು 19 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ಹೇಳಿದರು.</p>.<p>‘ಮುಷ್ಕರದ ನಿಮಿತ್ತ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗಕ್ಕೆ 4 ದಿನಗಳಿಂದ ₹1.40 ಕೋಟಿ ನಷ್ಟವಾಗಿದೆ’ ಎಂದು ಹೇಳಿದರು.</p>.<p class="Subhead"><strong>ಕುಟುಂಬ ಸಮೇತ ಪ್ರತಿಭಟನೆ:</strong>6ನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಏಪ್ರಿಲ್ 12ರಂದು ಕುಟುಂಬದವರ ಜೊತೆ ಪ್ರತಿಭಟನೆ ನಡೆಸಲಿದ್ದಾರೆ.</p>.<p>‘ಬಸ್ ನಿಲ್ದಾಣ ಹಾಗೂ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೋವಿಡ್ ಕಾರಣದಿಂದಾಗಿ ಕಾರಣದಿಂದ 50ರಿಂದ 60 ಜನ ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು’ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>