<p><strong>ದಾವಣಗೆರೆ:</strong> ಸರಕು ಸಾಗಣೆ ವಾಹನಗಳ ಸುಸ್ಥಿತಿ ಪ್ರಮಾಣ ಪತ್ರ (ಎಫ್ಸಿ) ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಸ್ಥಳೀಯ ಮತ್ತು ಗೂಡ್ಸ್ಶೆಡ್ ಲಾರಿ ಮಾಲೀಕರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಎದುರು ಜಮಾಯಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನ ತಲುಪಿದರು. ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಿದರು.</p>.<p>‘ಸರಕು ಸಾಗಣೆ ವಾಹನಗಳ ಸುಸ್ಥಿತಿ ಪ್ರಮಾಣ ಪತ್ರಕ್ಕೆ ಈವರೆಗೆ ₹ 1,200 ಇತ್ತು. ಈ ಶುಲ್ಕವನ್ನು ಸರ್ಕಾರ ಏಕಾಏಕಿ ₹ 28,000ಕ್ಕೆ ಹೆಚ್ಚಿಸಿದೆ. ಇದರಿಂದ ಲಾರಿ ಮಾಲೀಕರಿಗೆ ತೊಂದರೆ ಉಂಟಾಗಿದೆ. ಸರಕುಗಳನ್ನು ದೇಶದ ಎಲ್ಲೆಡೆ ಸಾಗಣೆ ಮಾಡುವ ಹೊಣೆಗಾರಿಕೆ ನಿಭಾಯಿಸುವ ಲಾರಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಜಿಲ್ಲಾ ಸ್ಥಳೀಯ ಮತ್ತು ಗೂಡ್ಸ್ಶೆಡ್ ಲಾರಿ ಮಾಲೀಕರ ಸಂಘದ ಅಧ್ಯಕ್ಷ ದಾದಾಪೀರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದುಬಾರಿ ಶುಲ್ಕ ಭರಿಸುವ ಶಕ್ತಿ ಲಾರಿ ಮಾಲೀಕರಿಗೆ ಇಲ್ಲ. ಕೇಂದ್ರ ಸರ್ಕಾರ ವಾಹನಗಳ ಮಾಲೀಕರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಈ ಹಿಂದೆ ಇದ್ದ ಶುಲ್ಕವನ್ನೇ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಗೌರವಾಧ್ಯಕ್ಷ ಅನ್ವರ್ ಸಾಬ್, ಉಪಾಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ಮೊಹಮದ್ ಅಲಿ, ಇಮಾಮ್ ಹುಸೇನ್, ಮನ್ಸೂರ್, ಎಚ್.ಕೆ. ಸುಭಾನ್, ಮಾಜಿ ಉಪ ಮೇಯರ್ ಗೋಪಿನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸರಕು ಸಾಗಣೆ ವಾಹನಗಳ ಸುಸ್ಥಿತಿ ಪ್ರಮಾಣ ಪತ್ರ (ಎಫ್ಸಿ) ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಸ್ಥಳೀಯ ಮತ್ತು ಗೂಡ್ಸ್ಶೆಡ್ ಲಾರಿ ಮಾಲೀಕರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಎದುರು ಜಮಾಯಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನ ತಲುಪಿದರು. ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಿದರು.</p>.<p>‘ಸರಕು ಸಾಗಣೆ ವಾಹನಗಳ ಸುಸ್ಥಿತಿ ಪ್ರಮಾಣ ಪತ್ರಕ್ಕೆ ಈವರೆಗೆ ₹ 1,200 ಇತ್ತು. ಈ ಶುಲ್ಕವನ್ನು ಸರ್ಕಾರ ಏಕಾಏಕಿ ₹ 28,000ಕ್ಕೆ ಹೆಚ್ಚಿಸಿದೆ. ಇದರಿಂದ ಲಾರಿ ಮಾಲೀಕರಿಗೆ ತೊಂದರೆ ಉಂಟಾಗಿದೆ. ಸರಕುಗಳನ್ನು ದೇಶದ ಎಲ್ಲೆಡೆ ಸಾಗಣೆ ಮಾಡುವ ಹೊಣೆಗಾರಿಕೆ ನಿಭಾಯಿಸುವ ಲಾರಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಜಿಲ್ಲಾ ಸ್ಥಳೀಯ ಮತ್ತು ಗೂಡ್ಸ್ಶೆಡ್ ಲಾರಿ ಮಾಲೀಕರ ಸಂಘದ ಅಧ್ಯಕ್ಷ ದಾದಾಪೀರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದುಬಾರಿ ಶುಲ್ಕ ಭರಿಸುವ ಶಕ್ತಿ ಲಾರಿ ಮಾಲೀಕರಿಗೆ ಇಲ್ಲ. ಕೇಂದ್ರ ಸರ್ಕಾರ ವಾಹನಗಳ ಮಾಲೀಕರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಈ ಹಿಂದೆ ಇದ್ದ ಶುಲ್ಕವನ್ನೇ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘದ ಗೌರವಾಧ್ಯಕ್ಷ ಅನ್ವರ್ ಸಾಬ್, ಉಪಾಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ಮೊಹಮದ್ ಅಲಿ, ಇಮಾಮ್ ಹುಸೇನ್, ಮನ್ಸೂರ್, ಎಚ್.ಕೆ. ಸುಭಾನ್, ಮಾಜಿ ಉಪ ಮೇಯರ್ ಗೋಪಿನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>