ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವಾರಿಯರ್‌ಗಳಿಗೆ ಸನ್ಮಾನ

Last Updated 20 ಸೆಪ್ಟೆಂಬರ್ 2022, 2:45 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತರು, ಪೊಲೀಸರು, ರುದ್ರಭೂಮಿಯಲ್ಲಿ ಕೆಲಸ ಮಾಡಿದ ಕೊರೊನಾ ವಾರಿಯರ್‌ಗಳನ್ನು, ಕಾಂಗ್ರೆಸ್‌ನ ಹಿರಿಯರನ್ನು ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಸನ್ಮಾನಿಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ವಹಿಸಿದ್ದರು. ಬಿ.ಎಚ್‌. ವೀರಭದ್ರಪ್ಪ ಸ್ವಾಗತಿಸಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಜಿಲ್ಲಾ ಸಂಘಟನೆ ಬಗ್ಗೆ ಮಾತನಾಡಿದರು. ಮಾಡಿರುವ ಕೆಲಸ ಮತ್ತು ಮುಂದೆ ಮಾಡಬೇಕಾದ ಕಾರ್ಯಗಳ ಬಗ್ಗೆ ಜಯದೇವ ನಾಯಕ್‍, ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿದರು.

ಮುಖಂಡರಾದ ದಿನೇಶ್ ಕೆ. ಶೆಟ್ಟಿ, ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ರಾಮಚಂದ್ರ ಕಲಾಲ್, ಮಾಗಾನಹಳ್ಳಿ ಪರಶುರಾಮ್, ಎ. ನಾಗರಾಜ್, ಗಡಿಗುಡಾಳ್ ಮಂಜುನಾಥ್, ಅನಿತಾಬಾಯಿ, ಮಹಾಂತೇಶ್ ಜಾಧವ್, ನಾಗರತ್ನಮ್ಮ, ಸೈಯದ್ ಸೈಪುಲ್ಲಾ, ಸಾದಿಕ್ ಪೈಲ್ವಾನ್, ಮಂಜಾನಾಯ್ಕ್, ಡೋಲಿ ಚಂದ್ರ, ಸುಭಾನ್‍ಸಾಬ್, ಕೆ.ಎ. ಮಂಜುನಾಥ್, ಮಂಜುನಾಥ ಕುಕ್ಕವಾಡ, ಜಿ. ರಾಕೇಶ್, ಹರೀಶ್ ಕೆ.ಎಲ್. ಬಸಾಪುರ, ಸಾಗರ್ ಎಲ್.ಎಚ್, ಎಸ್. ಮಲ್ಲಿಕಾರ್ಜುನ್ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT