<p><strong>ದಾವಣಗೆರೆ:</strong> ಪ್ರಾಣಿ, ಪಕ್ಷಿ, ಮರಗಳನ್ನು ಉಳಿಸಲು ಹೋಗಿ ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಯ ಕಾರ್ಯ, ಶ್ರಮವನ್ನು ನೆನೆಯುವುದಕ್ಕಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಡಿಎಫ್ಒ ಜಗನ್ನಾಥ್ ಹೇಳಿದರು.</p>.<p>ಇಲ್ಲಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಹುತಾತ್ಮರಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.</p>.<p>ಮನುಕುಲದ ಅಭಿವೃದ್ಧಿಗೆ ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಯೂ ಅತಿಮುಖ್ಯ. ಅಮೂಲ್ಯ ವೃಕ್ಷ ಸಂಪತ್ತಿಗೆ ಕೊಡಲಿ ಇಡುವ, ಕಾಡುಪ್ರಾಣಿಗಳಿಗೆ ಗುಂಡಿಕ್ಕುವ ದುಷ್ಕರ್ಮಿಗಳನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಪಡುವ ಕಷ್ಟ ಸಾಮಾನ್ಯವಾದುದ್ದಲ್ಲ ಎಂದು ವಿಶ್ಲೇಷಿಸಿದರು.</p>.<p>1730ರ ಸೆಪ್ಟೆಂಬರ್ 11 ರಂದು ಜೋಧಪುರ್ನ ಮಹಾರಾಜ ಅಭಯಸಿಂಗ್ನ ಸೈನಿಕರು ಕೆಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಕಿರ್ಜಿ ಮರಗಳನ್ನು ರಾಜನ ಹೊಸ ಅರಮನೆಗಾಗಿ ಕಡಿಯಲು ಬಂದಿದ್ದರು. ಇದನ್ನು ಬಿಷ್ಟೋಯಿ ಸಮುದಾಯ ವಿರೋಧಿಸಿತ್ತು. ಅದಕ್ಕಾಗಿ ಈ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಸೈನಿಕರು ಕೊಂದಿದ್ದರು. ಈ ದಿನವನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವೆಂದು ಘೋಷಿಸಿದೆ ಎಂದು ವಿವರಿಸಿದರು.</p>.<p>ಕರ್ನಾಟಕದಲ್ಲಿ ವೀರಪ್ಪನ್ ಕೃತ್ಯಕ್ಕೆ ಅನೇಕ ಪೊಲೀಸರು, ಅರಣ್ಯ ಇಲಾಖೆಯವರು ಪ್ರಾಣ ಕಳೆದುಕೊಂಡಿದ್ದರು ಎಂದು ನೆನಪು ಮಾಡಿಕೊಂಡರು.</p>.<p>ಸಾಮಾಜಿಕ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಸ್. ರಾಘವೇಂದ್ರ ರಾವ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮ್ಮರ್, ವಿವಿಧ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪ್ರಾಣಿ, ಪಕ್ಷಿ, ಮರಗಳನ್ನು ಉಳಿಸಲು ಹೋಗಿ ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಯ ಕಾರ್ಯ, ಶ್ರಮವನ್ನು ನೆನೆಯುವುದಕ್ಕಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಡಿಎಫ್ಒ ಜಗನ್ನಾಥ್ ಹೇಳಿದರು.</p>.<p>ಇಲ್ಲಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಹುತಾತ್ಮರಿಗೆ ಗೌರವ ಸಲ್ಲಿಸಿ ಅವರು ಮಾತನಾಡಿದರು.</p>.<p>ಮನುಕುಲದ ಅಭಿವೃದ್ಧಿಗೆ ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಯೂ ಅತಿಮುಖ್ಯ. ಅಮೂಲ್ಯ ವೃಕ್ಷ ಸಂಪತ್ತಿಗೆ ಕೊಡಲಿ ಇಡುವ, ಕಾಡುಪ್ರಾಣಿಗಳಿಗೆ ಗುಂಡಿಕ್ಕುವ ದುಷ್ಕರ್ಮಿಗಳನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಪಡುವ ಕಷ್ಟ ಸಾಮಾನ್ಯವಾದುದ್ದಲ್ಲ ಎಂದು ವಿಶ್ಲೇಷಿಸಿದರು.</p>.<p>1730ರ ಸೆಪ್ಟೆಂಬರ್ 11 ರಂದು ಜೋಧಪುರ್ನ ಮಹಾರಾಜ ಅಭಯಸಿಂಗ್ನ ಸೈನಿಕರು ಕೆಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಕಿರ್ಜಿ ಮರಗಳನ್ನು ರಾಜನ ಹೊಸ ಅರಮನೆಗಾಗಿ ಕಡಿಯಲು ಬಂದಿದ್ದರು. ಇದನ್ನು ಬಿಷ್ಟೋಯಿ ಸಮುದಾಯ ವಿರೋಧಿಸಿತ್ತು. ಅದಕ್ಕಾಗಿ ಈ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಸೈನಿಕರು ಕೊಂದಿದ್ದರು. ಈ ದಿನವನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವೆಂದು ಘೋಷಿಸಿದೆ ಎಂದು ವಿವರಿಸಿದರು.</p>.<p>ಕರ್ನಾಟಕದಲ್ಲಿ ವೀರಪ್ಪನ್ ಕೃತ್ಯಕ್ಕೆ ಅನೇಕ ಪೊಲೀಸರು, ಅರಣ್ಯ ಇಲಾಖೆಯವರು ಪ್ರಾಣ ಕಳೆದುಕೊಂಡಿದ್ದರು ಎಂದು ನೆನಪು ಮಾಡಿಕೊಂಡರು.</p>.<p>ಸಾಮಾಜಿಕ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಸ್. ರಾಘವೇಂದ್ರ ರಾವ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮ್ಮರ್, ವಿವಿಧ ಅಧಿಕಾರಿಗಳು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>