ಮಂಗಳವಾರ ಸುದ್ದಿಗೋಷ್ಠಿಯಲ್ಲಿ ‘ಮುರುಗೇಶ ನಿರಾಣಿ ಪರ ನೀವು ನಿಲ್ಲುವಿರಾ’ ಎಂಬ ಪತ್ರಕರ್ತರ ಪ್ರಶ್ನೆಗೆ, ‘ನಾನು ಯಾರ ಪರವೂ ಇಲ್ಲ; ವಿರೋಧವೂ ಇಲ್ಲ. ರಾಜಕೀಯ ಬೆಳವಣಿಗೆಯಲ್ಲಿ ನಿರಾಣಿ ಪಾತ್ರವಿಲ್ಲ. ಉಮೇಶ ಕತ್ತಿ ಅವರು ಹಿರಿಯ ಶಾಸಕರಾಗಿದ್ದು, ಮಂತ್ರಿ ಆಗಬೇಕು ಎಂಬ ಆಸೆ ಇದೆ. ಆದರೆ, ಪಕ್ಷದಲ್ಲಿ ಯಾರಿಗೂ ಯಡಿಯೂರಪ್ಪ ಬಗ್ಗೆ ಅಸಮಾಧಾನ ಇಲ್ಲ’ ಎಂದು ಉತ್ತರಿಸಿದರು.