<p><strong>ಹರಿಹರ:</strong> ತಾಲ್ಲೂಕಿನ ಹಲಸಬಾಳು ಹಾಗೂ ರಾಣೆಬೆನ್ನೂರು ತಾಲ್ಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮಗಳ ಮಧ್ಯದ ಹೆದ್ದಾರಿಯ ತುಂಗಭದ್ರಾ ಸೇತುವೆ ಮೇಲಿನ ಮಣ್ಣಿನಿಂದ ಮುಚ್ಚಿಹೋಗಿದ್ದ ಕಿಂಡಿಗಳನ್ನು ಬುಧವಾರ ಪಿಡಬ್ಲುಡಿ ಇಲಾಖೆಯಿಂದ ತೆರವುಗೊಳಿಸಲಾಯಿತು.</p>.<p>‘ತುಂಗಭದ್ರಾ ಸೇತುವೆ ದಾಟುವ ಸಂಕಷ್ಟ’ ಎಂಬ ಶೀರ್ಷಿಕೆಯಡಿ ಬುಧವಾರ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.</p>.<p>ಮಳೆ ನೀರು ನಿಂತು ಸೇತುವೆ ಮೇಲೆ ವಾಹನ ಸಂಚಾರ ದುಸ್ತರ ಆಗಿರುವ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದರಿಂದ ಎಚ್ಚೆತ್ತ ಪಿಡಬ್ಲುಡಿ ಅಧಿಕಾರಿಗಳು, ಬುಧವಾರ ತಮ್ಮ ಸಿಬ್ಬಂದಿ ಮೂಲಕ ಕಿಂಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.</p>.<p>‘ಈಗಲೂ ಈ ಸೇತುವೆ ನಿರ್ವಹಣೆ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ್ದು. ಆದರೂ ಮಾನವೀಯತೆ ದೃಷ್ಟಿಯಿಂದ ನಮ್ಮ ಸಿಬ್ಬಂದಿ ಮೂಲಕ ಸೇತುವೆ ಮೇಲಿನ ಕಿಂಡಿಗಳಲ್ಲಿದ್ದ ಮಣ್ಣನ್ನು ತೆಗೆಸಿ ಮಳೆ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ಪಿಡಬ್ಲುಡಿ ಎಇಇ ಶಿವಮೂರ್ತಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು. </p>.<p>‘ಈ ಸೇತುವೆ ಮೇಲೆ ಎರಡೂ ಬದಿ 34 ಕಿಂಡಿಗಳಿವೆ. ಆ ಎಲ್ಲಾ ಕಿಂಡಿಗಳಲ್ಲಿದ್ದ ಮಣ್ಣನ್ನು ತೆರವು ಮಾಡಲಾಗುತ್ತಿದೆ. ಗುರುವಾರ ಮತ್ತೆ ಕಾರ್ಯಾಚರಣೆ ನಡೆಸಿ ಎಲ್ಲಾ ಕಿಂಡಿಗಳನ್ನು ಸ್ವಚ್ಚಗೊಳಿಸಲಾಗುವುದು. ಸೇತುವೆ ಮೇಲೆ ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಶೇಖರಗೊಂಡಿದ್ದು, ಆ ಮಣ್ಣನ್ನು ಸಾಗಿಸುವ ಕೆಲಸವನ್ನೂ ಮಾನವೀಯತೆ ದೃಷ್ಟಿಯಿಂದ ಮಾಡಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ತಾಲ್ಲೂಕಿನ ಹಲಸಬಾಳು ಹಾಗೂ ರಾಣೆಬೆನ್ನೂರು ತಾಲ್ಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮಗಳ ಮಧ್ಯದ ಹೆದ್ದಾರಿಯ ತುಂಗಭದ್ರಾ ಸೇತುವೆ ಮೇಲಿನ ಮಣ್ಣಿನಿಂದ ಮುಚ್ಚಿಹೋಗಿದ್ದ ಕಿಂಡಿಗಳನ್ನು ಬುಧವಾರ ಪಿಡಬ್ಲುಡಿ ಇಲಾಖೆಯಿಂದ ತೆರವುಗೊಳಿಸಲಾಯಿತು.</p>.<p>‘ತುಂಗಭದ್ರಾ ಸೇತುವೆ ದಾಟುವ ಸಂಕಷ್ಟ’ ಎಂಬ ಶೀರ್ಷಿಕೆಯಡಿ ಬುಧವಾರ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.</p>.<p>ಮಳೆ ನೀರು ನಿಂತು ಸೇತುವೆ ಮೇಲೆ ವಾಹನ ಸಂಚಾರ ದುಸ್ತರ ಆಗಿರುವ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದರಿಂದ ಎಚ್ಚೆತ್ತ ಪಿಡಬ್ಲುಡಿ ಅಧಿಕಾರಿಗಳು, ಬುಧವಾರ ತಮ್ಮ ಸಿಬ್ಬಂದಿ ಮೂಲಕ ಕಿಂಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.</p>.<p>‘ಈಗಲೂ ಈ ಸೇತುವೆ ನಿರ್ವಹಣೆ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ್ದು. ಆದರೂ ಮಾನವೀಯತೆ ದೃಷ್ಟಿಯಿಂದ ನಮ್ಮ ಸಿಬ್ಬಂದಿ ಮೂಲಕ ಸೇತುವೆ ಮೇಲಿನ ಕಿಂಡಿಗಳಲ್ಲಿದ್ದ ಮಣ್ಣನ್ನು ತೆಗೆಸಿ ಮಳೆ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ಪಿಡಬ್ಲುಡಿ ಎಇಇ ಶಿವಮೂರ್ತಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು. </p>.<p>‘ಈ ಸೇತುವೆ ಮೇಲೆ ಎರಡೂ ಬದಿ 34 ಕಿಂಡಿಗಳಿವೆ. ಆ ಎಲ್ಲಾ ಕಿಂಡಿಗಳಲ್ಲಿದ್ದ ಮಣ್ಣನ್ನು ತೆರವು ಮಾಡಲಾಗುತ್ತಿದೆ. ಗುರುವಾರ ಮತ್ತೆ ಕಾರ್ಯಾಚರಣೆ ನಡೆಸಿ ಎಲ್ಲಾ ಕಿಂಡಿಗಳನ್ನು ಸ್ವಚ್ಚಗೊಳಿಸಲಾಗುವುದು. ಸೇತುವೆ ಮೇಲೆ ಮಣ್ಣು ಹೆಚ್ಚಿನ ಪ್ರಮಾಣದಲ್ಲಿ ಶೇಖರಗೊಂಡಿದ್ದು, ಆ ಮಣ್ಣನ್ನು ಸಾಗಿಸುವ ಕೆಲಸವನ್ನೂ ಮಾನವೀಯತೆ ದೃಷ್ಟಿಯಿಂದ ಮಾಡಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>