ವಿಶ್ವ ಶ್ರೇಷ್ಠ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಸೇತುವೆಯಲ್ಲಿ ಏಕಮುಖ ವಾಹನ ಸಂಚಾರಕ್ಕೆ ಮಾತ್ರ ಸಾಧ್ಯವಿತ್ತು. ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಸೇತುವೆ ಕಿರಿದಾಗಿದ್ದರಿಂದ ವಾಹನ ಸಂಚಾರ ದಟ್ಟಣೆಯ ಸಮಸ್ಯೆಯೇ ನಿರಂತರವಾಗಿ ಕಾಡುತ್ತಿತ್ತು. ಹೀಗಾಗಿ, ಈ ಸೇತುವೆ ಮಗ್ಗುಲಲ್ಲೇ ಹೊಸ ಸೇತುವೆ ನಿರ್ಮಾಣ ನಡೆಸಲಾಗಿದೆ. ಆದರೆ, ಈ ಕಾಮಗಾರಿ ಹಳೆಯ ಸೇತುವೆಯ ಕಂಬಗಳ ಬುನಾದಿಗೆ ಧಕ್ಕೆಯುಂಟು ಮಾಡಿದೆ.