<p><strong>ದಾವಣಗೆರೆ</strong>: ನಗರದ ರಂಗನಾಥ ಬಡಾವಣೆಯಲ್ಲಿ ₹ 2,000 ಮೌಲ್ಯದ ಟಿವಿ ಕದ್ದು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಗ್ರಾಮಾಂತರ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.</p><p>ದೇವರಾಜ ಅರಸು ಬಡಾವಣೆಯ ಫಕೀರ (50) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಇನ್ನೊಬ್ಬ ಆರೋಪಿ ರಾಜ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.</p><p>ನಗರದ ರಂಗನಾಥ ಬಡಾವಣೆಯ ರುದ್ರಯ್ಯ ಎಂಬುವರ ಮನೆಯಲ್ಲಿ 1998ರ ಸೆ.23ರಂದು ಟಿವಿ ಕಳವಾಗಿತ್ತು. ದೂರು ಆಧರಿಸಿ ಪೊಲೀಸರು ರವಿ ಮತ್ತು ಮುನಾವರ್ ಎಂಬುವರನ್ನು ಬಂಧಿಸಿ ಕಳವಾಗಿದ್ದ ಟಿವಿ ಜಪ್ತಿ ಮಾಡಿದ್ದರು. ಕೃತ್ಯದಲ್ಲಿ ಭಾಗಿಯಾಗಿದ್ದ ಫಕೀರ ಹಾಗೂ ರಾಜ ತಲೆಮರೆಸಿಕೊಂಡಿದ್ದರು.</p><p>ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ 2019ರವರೆಗೆ ಪೊಲೀಸರು ಪ್ರಯತ್ನಿಸಿದ್ದರು. ನಂತರ ಇದನ್ನು ಬಹುದಿನಗಳಿಂದ ಪತ್ತೆಯಾದ ಪ್ರಕರಣದ ಪಟ್ಟಿಗೆ ಸೇರಿಸಿದ್ದರು. ನೂತನ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ನಿರ್ದೇಶನದ ಮೇರೆಗೆ ಮರುಪತ್ತೆಗೆ ಮುಂದಾದ ಪೊಲೀಸರಿಗೆ ಆರೋಪಿ ಸೆರೆಸಿಕ್ಕಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರದ ರಂಗನಾಥ ಬಡಾವಣೆಯಲ್ಲಿ ₹ 2,000 ಮೌಲ್ಯದ ಟಿವಿ ಕದ್ದು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಗ್ರಾಮಾಂತರ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.</p><p>ದೇವರಾಜ ಅರಸು ಬಡಾವಣೆಯ ಫಕೀರ (50) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಇನ್ನೊಬ್ಬ ಆರೋಪಿ ರಾಜ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.</p><p>ನಗರದ ರಂಗನಾಥ ಬಡಾವಣೆಯ ರುದ್ರಯ್ಯ ಎಂಬುವರ ಮನೆಯಲ್ಲಿ 1998ರ ಸೆ.23ರಂದು ಟಿವಿ ಕಳವಾಗಿತ್ತು. ದೂರು ಆಧರಿಸಿ ಪೊಲೀಸರು ರವಿ ಮತ್ತು ಮುನಾವರ್ ಎಂಬುವರನ್ನು ಬಂಧಿಸಿ ಕಳವಾಗಿದ್ದ ಟಿವಿ ಜಪ್ತಿ ಮಾಡಿದ್ದರು. ಕೃತ್ಯದಲ್ಲಿ ಭಾಗಿಯಾಗಿದ್ದ ಫಕೀರ ಹಾಗೂ ರಾಜ ತಲೆಮರೆಸಿಕೊಂಡಿದ್ದರು.</p><p>ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ 2019ರವರೆಗೆ ಪೊಲೀಸರು ಪ್ರಯತ್ನಿಸಿದ್ದರು. ನಂತರ ಇದನ್ನು ಬಹುದಿನಗಳಿಂದ ಪತ್ತೆಯಾದ ಪ್ರಕರಣದ ಪಟ್ಟಿಗೆ ಸೇರಿಸಿದ್ದರು. ನೂತನ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ನಿರ್ದೇಶನದ ಮೇರೆಗೆ ಮರುಪತ್ತೆಗೆ ಮುಂದಾದ ಪೊಲೀಸರಿಗೆ ಆರೋಪಿ ಸೆರೆಸಿಕ್ಕಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>