ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ | ಹಸುಗಳ ಮೈತೊಳೆಯಲು ಹೋದ ಇಬ್ಬರು ಬಾಲಕರು ನೀರು ಪಾಲು

Last Updated 29 ಮೇ 2020, 14:15 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲೂಕಿನ ಎಚ್.ಗೋಪಗೊಂಡನಹಳ್ಳಿ ಗ್ರಾಮದ ಕೆರೆಯಲ್ಲಿ ಹಸುಗಳ ಮೈತೊಳೆಯಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಗ್ರಾಮದ ಕೆ.ರವಿ ಅವರ ಪುತ್ರ ಮನು ಅಲಿಯಾಸ್ ಮನೋಜ್ (13) ಹಾಗೂ ಗಣೇಶಪ್ಪ ಅವರ ಮಗ ಮಹೇಶ್ (13) ಮೃತಪಟ್ಟವರು. ಇವರಿಬ್ಬರು ಗ್ರಾಮದ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.

ಮಧ್ಯಾಹ್ನ 12.45ರ ವೇಳೆಯಲ್ಲಿ ಹಸುಗಳಿಗೆ ನೀರುಣಿಸಿ ಮೈತೊಳೆಯಲು ಹೋದಾಗ ಆಕಸ್ಮಿಕವಾಗಿ ಬಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್‌ತುಷಾರ್ ಬಿ.ಹೊಸೂರ, ಸಿಪಿಐ ದೇವರಾಜ್ ಹಾಗೂ ಪಿಎಸ್‌ಐ ತಿಪ್ಪೇಸ್ವಾಮಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಬೇಲಿಮಲ್ಲೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹರಿಹರದ ಈಜುಗಾರರು ಕಾರ್ಯಾಚರಣೆ ನಡೆಸಿ ಬಾಲಕರ ಮೃತದೇಹಗಳನ್ನು ಹೊರ ತೆಗೆದರು.

ಕುಟುಂಬಸ್ಥರ ರೋದನೆ:ತಮ್ಮ ಮಕ್ಕಳು ನೀರಿನಿಲ್ಲಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಕೆರೆ ಬಳಿ ಪೋಷಕರು, ಸಂಬಂಧಿಕರ ರೋದನೆ ಹೇಳತೀರದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT