ಏಪ್ರಿಲ್ 19ರಂದು ಜಿಲ್ಲಾಧಿಕಾರಿಯು ಸಹಾಯಕ ಚುನಾವಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಅಂಚೆ ಮತಪತ್ರ ಮತ್ತು ಇಡಿಸಿ ಜಿಲ್ಲಾ ನೋಡಲ್ ಅಧಿಕಾರಿ ಜೊತೆಗೆ ಪಾಲಿಕೆಗೆ ಭೇಟಿ ನೀಡಿದಾಗ ಅಂಚೆ ಮತಪತ್ರ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿ ಅಂಚೆ ಮತಪತ್ರಗಳನ್ನು ಹಾಕಲು ಕಚೇರಿ ಸಿಬ್ಬಂದಿ ಇಲ್ಲದಿರುವುದು ಕಂಡು ಬಂದಿದೆ. ಚುನಾವಣಾ ಕಾರ್ಯನಿರತ ಸಿಬ್ಬಂದಿಗಳ 923 ಇ.ಡಿ.ಸಿ ಅರ್ಜಿಗಳು ಬಾಕಿ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಹಾಗೂ ವಾಹನ ಚಾಲಕರ 397 ಇ.ಡಿ.ಸಿ ಅರ್ಜಿಗಳೂ ಪತ್ತೆಯಾಗಿಲ್ಲ. ಈ ಬಗ್ಗೆ ಅಂಚೆ ಮತಪತ್ರ ಹಾಗೂ ಇ.ಡಿ.ಸಿಯ ನೋಡಲ್ ಅಧಿಕಾರಿಗಳನ್ನು ವಿಚಾರಿಸಿದಾಗ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಹೀಗಾಗಿ ಈ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಆದೇಶಿಸಿದ್ದಾರೆ.