ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಟೈರ್ ಸಿಡಿದು ಇಬ್ಬರ ಸಾವು

Published 6 ಮೇ 2024, 4:42 IST
Last Updated 6 ಮೇ 2024, 4:42 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ ಹುಣಸೇಕಟ್ಟೆ ಗ್ರಾಮದ ಬಳಿ ಕಾರಿನ ಟೈರ್ ಸಿಡಿದು ಸೇತುವೆ ಮೇಲಿಂದ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಒಬ್ಬರಿಗೆ ಗಂಭೀರ ಗಾಯಗಳಾಗಿವೆ.

ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ನಿವಾಸಿ ಕೊಟ್ರೇಶಪ್ಪ (60) ಮೃತರು. ಹುಬ್ಬಳ್ಳಿಯ ಈರಮ್ಮ (54) ಮೃತರು. ಪುಷ್ಪಾ ಅವರಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆಯ ಕೆಎಚ್‌ಬಿ ಕಾಲೊನಿಯ ನಿವಾಸಿಯಾದ ಕೊಟ್ರೇಶಪ್ಪ ಅವರು ಮದುವೆ ಮುಗಿಸಿಕೊಂಡು ಈರಮ್ಮ ಅವರ ಜೊತೆ ತೆರಳುತ್ತಿದ್ದಾಗ ಅಪಘಾತವಾಗಿದೆ.  ಗಾಯಾಳುಗಳ ಪೈಕಿ ಪುಷ್ಪಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಇತರರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿದೆ. ‌

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT