ದಾವಣಗೆರೆಯ ಕೆಎಚ್ಬಿ ಕಾಲೊನಿಯ ನಿವಾಸಿಯಾದ ಕೊಟ್ರೇಶಪ್ಪ ಅವರು ಮದುವೆ ಮುಗಿಸಿಕೊಂಡು ಈರಮ್ಮ ಅವರ ಜೊತೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಗಾಯಾಳುಗಳ ಪೈಕಿ ಪುಷ್ಪಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಇತರರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿದೆ.