<p><strong>ಮಲಹಾಳ್ (ಚನ್ನಗಿರಿ): ‘</strong>ರಾಜ್ಯದಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ವೈಫಲ್ಯ ಕಂಡಿದ್ದವು. ಇಂತಹ ಸಮಯದಲ್ಲಿ ಉಬ್ರಾಣಿ ಏತ ನೀರಾವರಿ ಯೋಜನೆ ನಮ್ಮ ತಾಲ್ಲೂಕಿನಲ್ಲಿ ಯಶಸ್ವಿಯಾಗಿದ್ದು ಈ ಯೋಜನೆಯಿಂದ ರೈತರ ಬದುಕು ಹಸನಾಗಿದೆ’ ಎಂದು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಮಲಹಾಳ್ ಗ್ರಾಮದಲ್ಲಿ ಶುಕ್ರವಾರ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.</p>.<p>‘ಉಬ್ರಾಣಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿಂದಿನ ಶಾಸಕರಾಗಿದ್ದ ಕರಿಯಣ್ಣ, ಮಹಿಮಾ ಪಟೇಲ್, ವಡ್ನಾಳ್ ರಾಜಣ್ಣ ಹಾಗೂ ಡಿ.ಎಚ್. ಶಂಕರಮೂರ್ತಿ ಅವರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. 2008ರಲ್ಲಿ ನಾನು ಶಾಸಕನಾಗಿದ್ದ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಯೋಜನೆಗೆ ₹ 100 ಕೋಟಿ ಅನುದಾನವನ್ನು ಏಕಕಾಲದಲ್ಲಿ ಬಿಡುಗಡೆ ಮಾಡಿದ ಕಾರಣದಿಂದಾಗಿ ಅಂದಿನ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿಯವರು ಈ ಯೋಜನೆಯನ್ನು ಲೋಕಾರ್ಪಣೆ ಮಾಡಿದರು’ ಎಂದರು.</p>.<p>‘ಸಿರಿಗೆರೆ ಶ್ರೀಗಳು ಹಾಗೂ ಪಾಂಡೋಮಟ್ಟಿ ಸ್ವಾಮೀಜಿ ಸತತ ಪರಿಶ್ರಮದ ಫಲವಾಗಿ ಈ ಯೋಜನೆ ಯಶಸ್ವಿಯಾಯಿತು. ಈ ಭಾಗದ ಕೆರೆಗಳು ತುಂಬಿ ರೈತರು ನೆಮ್ಮದಿಯಿಂದ ಜೀವನ ಸಾಗುವಂತಾಗಿದೆ’ ಎಂದು ಹೇಳಿದರು.</p>.<p>‘ಶಾಸಕರು ಬೆಂಕಿಕೆರೆ, ಹೊದಿಗೆರೆ ಹಾಗೂ ಬಾಕಿ ಉಳಿದಿರುವ ಕೆರೆಗಳನ್ನು ತುಂಬಿಸಲು ಮುಂದಾಗಬೇಕು. ಕೆರೆಗಳು ತುಂಬಿರುವುದರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರೈತರು ಅಡಿಕೆ ತೋಟಗಳನ್ನು ಮಾಡಿಕೊಂಡು ನೆಮ್ಮದಿಯ ಜೀವನ ನಡೆಸುವಂತಾಗಿದೆ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ತಿಪ್ಪೇಶಪ್ಪ, ರಂಗನಾಥ್, ಕೆ.ಸಿ. ರವಿ, ಜಿ. ಕೃಷ್ಣಪ್ಪ, ಜಿ.ಎಸ್. ಬಸವಂತಪ್ಪ, ತಿಮ್ಮಯ್ಯ, ಪಾಲಾಕ್ಷಪ್ಪ, ದರ್ಶನ್, ಬಿಜೆಪಿ ಮಂಡಲ ಅಧ್ಯಕ್ಷ ಡಿ.ಸಿ. ಕುಮಾರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಹಾಳ್ (ಚನ್ನಗಿರಿ): ‘</strong>ರಾಜ್ಯದಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ವೈಫಲ್ಯ ಕಂಡಿದ್ದವು. ಇಂತಹ ಸಮಯದಲ್ಲಿ ಉಬ್ರಾಣಿ ಏತ ನೀರಾವರಿ ಯೋಜನೆ ನಮ್ಮ ತಾಲ್ಲೂಕಿನಲ್ಲಿ ಯಶಸ್ವಿಯಾಗಿದ್ದು ಈ ಯೋಜನೆಯಿಂದ ರೈತರ ಬದುಕು ಹಸನಾಗಿದೆ’ ಎಂದು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಮಲಹಾಳ್ ಗ್ರಾಮದಲ್ಲಿ ಶುಕ್ರವಾರ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.</p>.<p>‘ಉಬ್ರಾಣಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿಂದಿನ ಶಾಸಕರಾಗಿದ್ದ ಕರಿಯಣ್ಣ, ಮಹಿಮಾ ಪಟೇಲ್, ವಡ್ನಾಳ್ ರಾಜಣ್ಣ ಹಾಗೂ ಡಿ.ಎಚ್. ಶಂಕರಮೂರ್ತಿ ಅವರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. 2008ರಲ್ಲಿ ನಾನು ಶಾಸಕನಾಗಿದ್ದ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಯೋಜನೆಗೆ ₹ 100 ಕೋಟಿ ಅನುದಾನವನ್ನು ಏಕಕಾಲದಲ್ಲಿ ಬಿಡುಗಡೆ ಮಾಡಿದ ಕಾರಣದಿಂದಾಗಿ ಅಂದಿನ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿಯವರು ಈ ಯೋಜನೆಯನ್ನು ಲೋಕಾರ್ಪಣೆ ಮಾಡಿದರು’ ಎಂದರು.</p>.<p>‘ಸಿರಿಗೆರೆ ಶ್ರೀಗಳು ಹಾಗೂ ಪಾಂಡೋಮಟ್ಟಿ ಸ್ವಾಮೀಜಿ ಸತತ ಪರಿಶ್ರಮದ ಫಲವಾಗಿ ಈ ಯೋಜನೆ ಯಶಸ್ವಿಯಾಯಿತು. ಈ ಭಾಗದ ಕೆರೆಗಳು ತುಂಬಿ ರೈತರು ನೆಮ್ಮದಿಯಿಂದ ಜೀವನ ಸಾಗುವಂತಾಗಿದೆ’ ಎಂದು ಹೇಳಿದರು.</p>.<p>‘ಶಾಸಕರು ಬೆಂಕಿಕೆರೆ, ಹೊದಿಗೆರೆ ಹಾಗೂ ಬಾಕಿ ಉಳಿದಿರುವ ಕೆರೆಗಳನ್ನು ತುಂಬಿಸಲು ಮುಂದಾಗಬೇಕು. ಕೆರೆಗಳು ತುಂಬಿರುವುದರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರೈತರು ಅಡಿಕೆ ತೋಟಗಳನ್ನು ಮಾಡಿಕೊಂಡು ನೆಮ್ಮದಿಯ ಜೀವನ ನಡೆಸುವಂತಾಗಿದೆ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ತಿಪ್ಪೇಶಪ್ಪ, ರಂಗನಾಥ್, ಕೆ.ಸಿ. ರವಿ, ಜಿ. ಕೃಷ್ಣಪ್ಪ, ಜಿ.ಎಸ್. ಬಸವಂತಪ್ಪ, ತಿಮ್ಮಯ್ಯ, ಪಾಲಾಕ್ಷಪ್ಪ, ದರ್ಶನ್, ಬಿಜೆಪಿ ಮಂಡಲ ಅಧ್ಯಕ್ಷ ಡಿ.ಸಿ. ಕುಮಾರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>