<p><strong>ದಾವಣಗೆರೆ</strong>: ‘ಅಹಿಂದ’ ವರ್ಗದ ಹಿತಾಸಕ್ತಿಯನ್ನು ಕಡೆಗಣಿಸಿದ ಬಿಜೆಪಿ, ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ವಿ.ಎಸ್. ಉಗ್ರಪ್ಪ ಆರೋಪಿಸಿದರು.</p><p>‘ಸಮಾಜದ ಒಂದು ವರ್ಗದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಮಾತ್ರ ಬಿಜೆಪಿ ನಿರತವಾಗಿದೆ. ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಮೀಸಲಾತಿ ಪ್ರಮಾಣ ಏರಿಕೆ ಮಾಡಿರುವುದನ್ನು ಸಂವಿಧಾನದ ಪರಿಚ್ಛೇದ 9ಕ್ಕೆ ಸೇರಿಸದೇ ಕಾಲಾಹರಣ ಮಾಡುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>‘ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಚುನಾವಣೆಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಮಾತಿನ ಮೂಲಕ ಮತದಾರರನ್ನು ಸೆಳೆದು ಅವಮಾನಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಮೋದಿ ಅವರು ಪ್ರಧಾನಿಯಾದ ಬಳಿಕ ಇಂಧನ ಬೆಲೆ ಗಗನಕ್ಕೆ ಏರುತ್ತಿದೆ. ದಿನಬಳಕೆ ಅಗತ್ಯ ವಸ್ತುಗಳ ದರ ಕೂಡ ಏರಿಕೆಯಾಗುತ್ತಿದೆ. ದೇಶಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ. ಗುರುದಕ್ಷಿಣೆಯ ಹೆಸರಿನಲ್ಲಿ ಆರ್ಎಸ್ಎಸ್ ಕೋಟ್ಯಂತರ ರೂಪಾಯಿ ಸಂಗ್ರಹಿಸಿದರೂ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p><p>‘ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯನ್ನು ಮಾದರಿ ಜಿಲ್ಲೆಯಾಗಿ ಅಭಿವೃದ್ಧಿಪಡಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ರೂಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಶಿಕ್ಷಣ, ವೈದ್ಯಕೀಯ ಹಾಗೂ ಕಾಗಾರಿಕಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯ ಬಳಿಕ ನಡೆಯುತ್ತಿರುವ ಉಪಚುನಾವಣೆಗೆ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮತದಾರರು ಶಿವಶಂಕರಪ್ಪ ಅವರ ಮೊಮ್ಮಗನ ಕೈಹಿಡಿಯುವ ವಿಶ್ವಾಸವಿದೆ’ ಎಂದು ಹೇಳಿದರು.</p><p>ಕಾಂಗ್ರೆಸ್ ಮುಖಂಡರಾದ ಸಿ.ಎಂ. ಧನಂಜಯ, ದಿನೇಶ್ ಕೊಂಡಜ್ಜಿ, ಎಸ್.ಟಿ.ಶಾಂತಕುಮಾರ್, ಸ್ವಾತಿ ಚಂದ್ರಶೇಖರ್, ವರುಣ್, ಗೋವಿಂದಸ್ವಾಮಿ ಹಾಜರಿದ್ದರು.</p>.<div><blockquote>ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಸಾಲ ವಿಪರೀತ ಏರಿಕೆಯಾಗಿದೆ. ಆದರೂ, ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.</blockquote><span class="attribution">– ವಿ.ಎಸ್. ಉಗ್ರಪ್ಪ, ಮಾಜಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಅಹಿಂದ’ ವರ್ಗದ ಹಿತಾಸಕ್ತಿಯನ್ನು ಕಡೆಗಣಿಸಿದ ಬಿಜೆಪಿ, ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ವಿ.ಎಸ್. ಉಗ್ರಪ್ಪ ಆರೋಪಿಸಿದರು.</p><p>‘ಸಮಾಜದ ಒಂದು ವರ್ಗದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಮಾತ್ರ ಬಿಜೆಪಿ ನಿರತವಾಗಿದೆ. ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಮೀಸಲಾತಿ ಪ್ರಮಾಣ ಏರಿಕೆ ಮಾಡಿರುವುದನ್ನು ಸಂವಿಧಾನದ ಪರಿಚ್ಛೇದ 9ಕ್ಕೆ ಸೇರಿಸದೇ ಕಾಲಾಹರಣ ಮಾಡುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>‘ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಚುನಾವಣೆಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಮಾತಿನ ಮೂಲಕ ಮತದಾರರನ್ನು ಸೆಳೆದು ಅವಮಾನಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಮೋದಿ ಅವರು ಪ್ರಧಾನಿಯಾದ ಬಳಿಕ ಇಂಧನ ಬೆಲೆ ಗಗನಕ್ಕೆ ಏರುತ್ತಿದೆ. ದಿನಬಳಕೆ ಅಗತ್ಯ ವಸ್ತುಗಳ ದರ ಕೂಡ ಏರಿಕೆಯಾಗುತ್ತಿದೆ. ದೇಶಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ. ಗುರುದಕ್ಷಿಣೆಯ ಹೆಸರಿನಲ್ಲಿ ಆರ್ಎಸ್ಎಸ್ ಕೋಟ್ಯಂತರ ರೂಪಾಯಿ ಸಂಗ್ರಹಿಸಿದರೂ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p><p>‘ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯನ್ನು ಮಾದರಿ ಜಿಲ್ಲೆಯಾಗಿ ಅಭಿವೃದ್ಧಿಪಡಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ರೂಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಶಿಕ್ಷಣ, ವೈದ್ಯಕೀಯ ಹಾಗೂ ಕಾಗಾರಿಕಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯ ಬಳಿಕ ನಡೆಯುತ್ತಿರುವ ಉಪಚುನಾವಣೆಗೆ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮತದಾರರು ಶಿವಶಂಕರಪ್ಪ ಅವರ ಮೊಮ್ಮಗನ ಕೈಹಿಡಿಯುವ ವಿಶ್ವಾಸವಿದೆ’ ಎಂದು ಹೇಳಿದರು.</p><p>ಕಾಂಗ್ರೆಸ್ ಮುಖಂಡರಾದ ಸಿ.ಎಂ. ಧನಂಜಯ, ದಿನೇಶ್ ಕೊಂಡಜ್ಜಿ, ಎಸ್.ಟಿ.ಶಾಂತಕುಮಾರ್, ಸ್ವಾತಿ ಚಂದ್ರಶೇಖರ್, ವರುಣ್, ಗೋವಿಂದಸ್ವಾಮಿ ಹಾಜರಿದ್ದರು.</p>.<div><blockquote>ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಸಾಲ ವಿಪರೀತ ಏರಿಕೆಯಾಗಿದೆ. ಆದರೂ, ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.</blockquote><span class="attribution">– ವಿ.ಎಸ್. ಉಗ್ರಪ್ಪ, ಮಾಜಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>