<p><strong>ದಾವಣಗೆರೆ</strong>: ಜಾಗತಿಕ ಮಟ್ಟದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಇದೆ. ಪೈಪೋಟಿ ಎದುರಿಸಿ ಮುನ್ನುಗ್ಗಿದರೆ ಭವಿಷ್ಯದ ದಾರಿ ಸುಲಭವಾಗುತ್ತದೆ. ಓದಿನ ಜೊತೆ ವ್ಯವಹಾರ ಜ್ಞಾನ, ವೃತ್ತಿ ಕೌಶಲ್ಯ, ಸಂವಹನ ಕಲೆ ರೂಢಿಸಿಕೊಳ್ಳಬೇಕು ಎಂದು ನೇತ್ರ ತಜ್ಞ ಡಾ.ಶ್ರೀನಿವಾಸ ಜೋಶಿ ಸಲಹೆ ನೀಡಿದರು.</p>.<p>ನಗರದ ಹೊರವಲಯದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಉದ್ಯಮ ವಿಶ್ಲೇಷಣೆ ಸ್ಪರ್ಧೆ ಉತ್ಕರ್ಷ-2025 ಉದ್ಘಾಟಿಸಿ ಮಾತನಾಡಿದರು.</p>.<p>‘ತಂತ್ರಜ್ಞಾನ ವ್ಯಾಪಕವಾಗುತ್ತಿದೆ. ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಪರಿವರ್ತನೆಗಳತ್ತ ಗಮನ ಹರಿಸಬೇಕು. ಪ್ರತಿ ಉದ್ಯಮದ ಮೇಲೆ ಇವು ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದರು.</p>.<p>‘ವಿದ್ಯಾರ್ಥಿಗಳು ಓದು, ಅಂಕಗಳಿಗಷ್ಟೇ ಆದ್ಯತೆ ನೀಡದೆ ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತಲೂ ಗಮನ ಕೊಡಬೇಕು. ಉತ್ತಮ ಆಹಾರ ಕ್ರಮ, ವ್ಯಾಯಾಮಗಳ ಜೊತೆ ಒತ್ತಡ ನಿವಾರಿಸಿಕೊಳ್ಳಬೇಕು. ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತು ಪ್ರಗತಿಯನ್ನು ಮೌಲ್ಯಮಾಪನ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಬೆಂಗಳೂರಿನ ಫಿನ್ಟೆಕ್ ಏಕ್ಸ್ಪರ್ಟ್ ಸಂಸ್ಥೆಯ ಉಪಾಧ್ಯಕ್ಷ ಮಂಜುನಾಥ ಉದ್ಯಾವರ, ವಿಜ್ಞಾನ ನಿಕಾಯದ ಡೀನ್ ಪ್ರೊ.ಯು.ಎಸ್.ಮಹಾಬಲೇಶ್ವರ ಮಾತನಾಡಿದರು. ಪ್ರೊ.ಜೆ.ಕೆ.ರಾಜು, ಪ್ರಾಧ್ಯಾಪಕರಾದ ಸುನಿತಾ, ಆಸೀಫ್ ಉಲ್ಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಾಗತಿಕ ಮಟ್ಟದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಇದೆ. ಪೈಪೋಟಿ ಎದುರಿಸಿ ಮುನ್ನುಗ್ಗಿದರೆ ಭವಿಷ್ಯದ ದಾರಿ ಸುಲಭವಾಗುತ್ತದೆ. ಓದಿನ ಜೊತೆ ವ್ಯವಹಾರ ಜ್ಞಾನ, ವೃತ್ತಿ ಕೌಶಲ್ಯ, ಸಂವಹನ ಕಲೆ ರೂಢಿಸಿಕೊಳ್ಳಬೇಕು ಎಂದು ನೇತ್ರ ತಜ್ಞ ಡಾ.ಶ್ರೀನಿವಾಸ ಜೋಶಿ ಸಲಹೆ ನೀಡಿದರು.</p>.<p>ನಗರದ ಹೊರವಲಯದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಉದ್ಯಮ ವಿಶ್ಲೇಷಣೆ ಸ್ಪರ್ಧೆ ಉತ್ಕರ್ಷ-2025 ಉದ್ಘಾಟಿಸಿ ಮಾತನಾಡಿದರು.</p>.<p>‘ತಂತ್ರಜ್ಞಾನ ವ್ಯಾಪಕವಾಗುತ್ತಿದೆ. ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಪರಿವರ್ತನೆಗಳತ್ತ ಗಮನ ಹರಿಸಬೇಕು. ಪ್ರತಿ ಉದ್ಯಮದ ಮೇಲೆ ಇವು ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂದರು.</p>.<p>‘ವಿದ್ಯಾರ್ಥಿಗಳು ಓದು, ಅಂಕಗಳಿಗಷ್ಟೇ ಆದ್ಯತೆ ನೀಡದೆ ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತಲೂ ಗಮನ ಕೊಡಬೇಕು. ಉತ್ತಮ ಆಹಾರ ಕ್ರಮ, ವ್ಯಾಯಾಮಗಳ ಜೊತೆ ಒತ್ತಡ ನಿವಾರಿಸಿಕೊಳ್ಳಬೇಕು. ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತು ಪ್ರಗತಿಯನ್ನು ಮೌಲ್ಯಮಾಪನ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಬೆಂಗಳೂರಿನ ಫಿನ್ಟೆಕ್ ಏಕ್ಸ್ಪರ್ಟ್ ಸಂಸ್ಥೆಯ ಉಪಾಧ್ಯಕ್ಷ ಮಂಜುನಾಥ ಉದ್ಯಾವರ, ವಿಜ್ಞಾನ ನಿಕಾಯದ ಡೀನ್ ಪ್ರೊ.ಯು.ಎಸ್.ಮಹಾಬಲೇಶ್ವರ ಮಾತನಾಡಿದರು. ಪ್ರೊ.ಜೆ.ಕೆ.ರಾಜು, ಪ್ರಾಧ್ಯಾಪಕರಾದ ಸುನಿತಾ, ಆಸೀಫ್ ಉಲ್ಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>