<p><strong>ಬಸವಾಪಟ್ಟಣ</strong>: ಕಳೆದ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗಿ, ಈ ಭಾಗದ ಕೆರೆ ಕಟ್ಟೆಗಳು ಸಂಪೂರ್ಣ ಒಣಗಿ, ಜನ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. </p>.<p>ಬೇಸಿಗೆ ಹಂಗಾಮಿನ ಬೆಳೆಗಳು ನೀರಿಲ್ಲದೇ ಒಣಗಿವೆ. ಫೆಬ್ರುವರಿಯಿಂದ ಬೇಸಿಗೆಯ ಬಿರು ಬಿಸಿಲು ಜನರನ್ನು ಹೈರಾಣಾಗಿಸಿದೆ. ಏಪ್ರಿಲ್ನಿಂದ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. </p>.<p>ಮುಂಜಾನೆ 10 ಗಂಟೆಯಿಂದ ಸಂಜೆ 6ರ ವರೆಗೆ ಮಕ್ಕಳು ವೃದ್ಧರು, ರೋಗಿಗಳು ಬಿಸಿಲಿನ ತಾಪದಿಂದಾಗಿ ಮನೆಯಿಂದ ಹೊರಬಾರದಂತಾಗಿದೆ. </p>.<p>ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ಹೊಡೆತಕ್ಕೆ ಜನ ಸಂಚಾರ ಕಡಿಮೆಯಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ. ಈ ವೇಳೆಗೆ ಪ್ರತಿ ವರ್ಷ ಬರುತ್ತಿದ್ದ ಮಳೆರಾಯ ಈ ಬಾರಿ ಇನ್ನೂ ಬಂದಿಲ್ಲ. ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ಪಾರಾಗಲು ಮಜ್ಜಿಗೆ, ಎಳನೀರು, ಪಾನಕ, ಇತರ ತಂಪಾದ ಪಾನೀಯಗಳು, ಕಲ್ಲಂಗಡಿ ಕರಬೂಜದಂತಹ ಹಣ್ಣುಗಳ ಸೇವನೆಯಲ್ಲಿ ತೊಡಗಿದ್ದಾರೆ. </p>.<p>ಸಿದ್ಧಪಡಿಸಿದ ತಂಪು ಪಾನೀಯಗಳು ಮತ್ತು ಶುದ್ಧ ನೀರಿನ ಬಾಟಲಿಗಳು ಹೆಚ್ಚು ಖರೀದಿಯಾಗುತ್ತಿವೆ. ಮದ್ಯದ ಅಂಗಡಿಗಳಲ್ಲಿ ಬಿಯರ್ ಮಾರಾಟ ಜೋರಾಗಿದೆ. ಬಿಸಿಲಿನ ಪರಿಣಾಮವಾಗಿ ಸಂತೆಗಳು, ಜಾತ್ರೆಗಳು, ರಥೋತ್ಸವಗಳು, ಮದುವೆಯಂತಹ ಶುಭಕಾರ್ಯಗಳಲ್ಲಿಯೂ ಜನ ಹೆಚ್ಚಾಗಿ ಸೇರುತ್ತಿಲ್ಲ. </p>.<p>ಚುನಾವಣೆಯಲ್ಲಿಯೂ ಅಭ್ಯರ್ಥಿಗಳೊಂದಿಗೆ ಯುವಕರು ಮಾತ್ರವೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೇವಿಸಿದ ಆಹಾರ ಪದಾರ್ಥಗಳು ಸರಿಯಾಗಿ ಜೀರ್ಣವಾಗದೇ ಅಶಕ್ತರು ಅಜೀರ್ಣತೆಯಿಂದ ಬಳಲುತ್ತಿದ್ದಾರೆ. ಅನಿವಾರ್ಯ ಸಂದರ್ಭಗಳನ್ನು ಬಿಟ್ಟರೆ ಜನರು ದೂರದ ಊರುಗಳಿಗೆ ಪ್ರಯಾಣ ಮಾಡಲು ಹಿಂಜರಿಯುತ್ತಿದ್ದಾರೆ. </p>.<p>ವ್ಯಾಪಾರಿಗಳು ಸಂತೆಗೆ ಮಾರಲು ತಂದ ತರಕಾರಿ ಮತ್ತು ಹಣ್ಣು, ಹೂಗಳು ಬಿಸಿಲಿನಿಂದ ಒಣಗುತ್ತಿವೆ. ಕೆಲ ವ್ಯಾಪಾರಿಗಳು ಸಂತೆಗಳಿಗೆ ಬರುವುದನ್ನು ನಿಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ</strong>: ಕಳೆದ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗಿ, ಈ ಭಾಗದ ಕೆರೆ ಕಟ್ಟೆಗಳು ಸಂಪೂರ್ಣ ಒಣಗಿ, ಜನ ಜಾನುವಾರುಗಳಿಗೆ ನೀರಿಲ್ಲದಂತಾಗಿದೆ. </p>.<p>ಬೇಸಿಗೆ ಹಂಗಾಮಿನ ಬೆಳೆಗಳು ನೀರಿಲ್ಲದೇ ಒಣಗಿವೆ. ಫೆಬ್ರುವರಿಯಿಂದ ಬೇಸಿಗೆಯ ಬಿರು ಬಿಸಿಲು ಜನರನ್ನು ಹೈರಾಣಾಗಿಸಿದೆ. ಏಪ್ರಿಲ್ನಿಂದ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. </p>.<p>ಮುಂಜಾನೆ 10 ಗಂಟೆಯಿಂದ ಸಂಜೆ 6ರ ವರೆಗೆ ಮಕ್ಕಳು ವೃದ್ಧರು, ರೋಗಿಗಳು ಬಿಸಿಲಿನ ತಾಪದಿಂದಾಗಿ ಮನೆಯಿಂದ ಹೊರಬಾರದಂತಾಗಿದೆ. </p>.<p>ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ಹೊಡೆತಕ್ಕೆ ಜನ ಸಂಚಾರ ಕಡಿಮೆಯಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ. ಈ ವೇಳೆಗೆ ಪ್ರತಿ ವರ್ಷ ಬರುತ್ತಿದ್ದ ಮಳೆರಾಯ ಈ ಬಾರಿ ಇನ್ನೂ ಬಂದಿಲ್ಲ. ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ಪಾರಾಗಲು ಮಜ್ಜಿಗೆ, ಎಳನೀರು, ಪಾನಕ, ಇತರ ತಂಪಾದ ಪಾನೀಯಗಳು, ಕಲ್ಲಂಗಡಿ ಕರಬೂಜದಂತಹ ಹಣ್ಣುಗಳ ಸೇವನೆಯಲ್ಲಿ ತೊಡಗಿದ್ದಾರೆ. </p>.<p>ಸಿದ್ಧಪಡಿಸಿದ ತಂಪು ಪಾನೀಯಗಳು ಮತ್ತು ಶುದ್ಧ ನೀರಿನ ಬಾಟಲಿಗಳು ಹೆಚ್ಚು ಖರೀದಿಯಾಗುತ್ತಿವೆ. ಮದ್ಯದ ಅಂಗಡಿಗಳಲ್ಲಿ ಬಿಯರ್ ಮಾರಾಟ ಜೋರಾಗಿದೆ. ಬಿಸಿಲಿನ ಪರಿಣಾಮವಾಗಿ ಸಂತೆಗಳು, ಜಾತ್ರೆಗಳು, ರಥೋತ್ಸವಗಳು, ಮದುವೆಯಂತಹ ಶುಭಕಾರ್ಯಗಳಲ್ಲಿಯೂ ಜನ ಹೆಚ್ಚಾಗಿ ಸೇರುತ್ತಿಲ್ಲ. </p>.<p>ಚುನಾವಣೆಯಲ್ಲಿಯೂ ಅಭ್ಯರ್ಥಿಗಳೊಂದಿಗೆ ಯುವಕರು ಮಾತ್ರವೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೇವಿಸಿದ ಆಹಾರ ಪದಾರ್ಥಗಳು ಸರಿಯಾಗಿ ಜೀರ್ಣವಾಗದೇ ಅಶಕ್ತರು ಅಜೀರ್ಣತೆಯಿಂದ ಬಳಲುತ್ತಿದ್ದಾರೆ. ಅನಿವಾರ್ಯ ಸಂದರ್ಭಗಳನ್ನು ಬಿಟ್ಟರೆ ಜನರು ದೂರದ ಊರುಗಳಿಗೆ ಪ್ರಯಾಣ ಮಾಡಲು ಹಿಂಜರಿಯುತ್ತಿದ್ದಾರೆ. </p>.<p>ವ್ಯಾಪಾರಿಗಳು ಸಂತೆಗೆ ಮಾರಲು ತಂದ ತರಕಾರಿ ಮತ್ತು ಹಣ್ಣು, ಹೂಗಳು ಬಿಸಿಲಿನಿಂದ ಒಣಗುತ್ತಿವೆ. ಕೆಲ ವ್ಯಾಪಾರಿಗಳು ಸಂತೆಗಳಿಗೆ ಬರುವುದನ್ನು ನಿಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>