ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ಹೊಡೆತಕ್ಕೆ ಜನ ಸಂಚಾರ ಕಡಿಮೆಯಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ. ಈ ವೇಳೆಗೆ ಪ್ರತಿ ವರ್ಷ ಬರುತ್ತಿದ್ದ ಮಳೆರಾಯ ಈ ಬಾರಿ ಇನ್ನೂ ಬಂದಿಲ್ಲ. ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ಪಾರಾಗಲು ಮಜ್ಜಿಗೆ, ಎಳನೀರು, ಪಾನಕ, ಇತರ ತಂಪಾದ ಪಾನೀಯಗಳು, ಕಲ್ಲಂಗಡಿ ಕರಬೂಜದಂತಹ ಹಣ್ಣುಗಳ ಸೇವನೆಯಲ್ಲಿ ತೊಡಗಿದ್ದಾರೆ.