ಹೋಬಳಿಯ ಉಚ್ಚಂಗಿದುರ್ಗ, ಹಿರೇಮೆಗಳಗೆರೆ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ದಾಖಲೆ ಮಳೆಗೆ ಶೇಖರನಾಯ್ಕ ಅವರ ಮನೆಗೆ ನೀರು ನುಗ್ಗಿ, ಸಂಪೂರ್ಣ ಜಲಾವೃತಗೊಂಡಿತ್ತು. ಮನೆಯಲ್ಲಿನ ನೀರನ್ನು ಸೋಮವಾರ ಹೊರಹಾಕಿ ವಾಸಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದರು. ಆದರೆ ಅಧಿಕ ತೇವಾಂಶದಿಂದ ಮನೆಯೊಳಗಿನ ಗೋಡೆ ಕುಸಿದಿದೆ.
ಬುಧವಾರ ಬೆಳಿಗ್ಗೆ ಸ್ಥಳಕ್ಕೆ ಅರಸೀಕೆರೆ ರಾಜಸ್ವ ನಿರೀಕ್ಷಕ ಶ್ರೀಧರ್, ಗ್ರಾಮ ಲೆಕ್ಕಾಧಿಕಾರಿ ಶ್ರೀಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.