‘1970ರ ದಶಕದಲ್ಲಿ ದಾವಣಗೆರೆ ವ್ಯಾಪಾರ ವಹಿವಾಟು ಮಾಡುವ ಸ್ಥಳವಾಗಿತ್ತು. ಆದರೆ ಇಂದು ಶೈಕ್ಷಣಿಕ ಕ್ಷೇತ್ರವಾಗಿ ಬೆಳೆದಿದೆ. ಹಣ ಮಾಡುವುದು ಮುಖ್ಯವಲ್ಲ, ಸಮಾಜಕ್ಕೆ ಸೇವೆ ಮಾಡುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ತಂದೆ-ತಾಯಿಗಳಿಗಿಂತ ಹೆಚ್ಚು ಮೇಷ್ಟ್ರು ಸಂತೋಷ ಪಡುತ್ತಾರೆ’ ಎಂದು ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು.