<p><strong>ದಾವಣಗೆರೆ: </strong>ಉತ್ತರ ಭಾರತ ರಾಜ್ಯಗಳ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಇರುವುದರಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಹೆಚ್ಚು ಮಂದಿ ತೇರ್ಗಡೆ ಹೊಂದುತ್ತಾರೆ ಎಂದು ಯುಪಿಎಸ್ಸಿ31ನೇ ರ್ಯಾಂಕ್ ವಿಜೇತ ಅವಿನಾಶ್ವಿ.ಅಭಿಪ್ರಾಯಪಟ್ಟರು.</p>.<p>ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಐಕ್ಯೂಎಸಿ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರೇರಣಾ ಭಾಷಣ’ ಕಾರ್ಯಕ್ರಮದಲ್ಲಿಅವರುಮಾತನಾಡಿದರು.</p>.<p>ಕರ್ನಾಟಕದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವು ಬಹಳ ಕಡಿಮೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯದ ಶಾಲಾ– ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯ ಘಟ್ಟ. ಹಾಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ತಾವು ಓದಿದ್ದನ್ನು ಪುನರಾವರ್ತನೆ ಮಾಡುತ್ತಿರಬೇಕು. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಬೇಕು’ ಎಂದು ಹೇಳಿದರು.</p>.<p>‘1970ರ ದಶಕದಲ್ಲಿ ದಾವಣಗೆರೆ ವ್ಯಾಪಾರ ವಹಿವಾಟು ಮಾಡುವ ಸ್ಥಳವಾಗಿತ್ತು. ಆದರೆ ಇಂದು ಶೈಕ್ಷಣಿಕ ಕ್ಷೇತ್ರವಾಗಿ ಬೆಳೆದಿದೆ. ಹಣ ಮಾಡುವುದು ಮುಖ್ಯವಲ್ಲ, ಸಮಾಜಕ್ಕೆ ಸೇವೆ ಮಾಡುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ತಂದೆ-ತಾಯಿಗಳಿಗಿಂತ ಹೆಚ್ಚು ಮೇಷ್ಟ್ರು ಸಂತೋಷ ಪಡುತ್ತಾರೆ’ ಎಂದು ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು.</p>.<p>‘ಎ.ವಿ.ಕೆ ಕಾಲೇಜು ತರಗತಿಗಳ ಪಾಠಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಯಾವುದನ್ನು ಓದಬೇಕು, ಯಾವುದನ್ನು ಓದಬಾರದು ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹಳ ಮುಖ್ಯ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ತಿಳಿಸಿದರು.</p>.<p>ಐಕ್ಯೂಎಸಿ ಸಂಯೋಜಕ ಪ್ರೊ. ಶಿವಕುಮಾರ್ ಆರ್.ಆರ್. ಇದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಿ.ಜೆ. ನಾಗವೇಣಿ, ಸ್ವಾಗತಿಸಿದರು. ಸೈಯಿದ್ ಸಾನಿಯ ವಂದಿಸಿದರು. ಸಹನಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಉತ್ತರ ಭಾರತ ರಾಜ್ಯಗಳ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಇರುವುದರಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಹೆಚ್ಚು ಮಂದಿ ತೇರ್ಗಡೆ ಹೊಂದುತ್ತಾರೆ ಎಂದು ಯುಪಿಎಸ್ಸಿ31ನೇ ರ್ಯಾಂಕ್ ವಿಜೇತ ಅವಿನಾಶ್ವಿ.ಅಭಿಪ್ರಾಯಪಟ್ಟರು.</p>.<p>ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಐಕ್ಯೂಎಸಿ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ‘ಪ್ರೇರಣಾ ಭಾಷಣ’ ಕಾರ್ಯಕ್ರಮದಲ್ಲಿಅವರುಮಾತನಾಡಿದರು.</p>.<p>ಕರ್ನಾಟಕದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವು ಬಹಳ ಕಡಿಮೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯದ ಶಾಲಾ– ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯ ಘಟ್ಟ. ಹಾಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ತಾವು ಓದಿದ್ದನ್ನು ಪುನರಾವರ್ತನೆ ಮಾಡುತ್ತಿರಬೇಕು. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇರಬೇಕು’ ಎಂದು ಹೇಳಿದರು.</p>.<p>‘1970ರ ದಶಕದಲ್ಲಿ ದಾವಣಗೆರೆ ವ್ಯಾಪಾರ ವಹಿವಾಟು ಮಾಡುವ ಸ್ಥಳವಾಗಿತ್ತು. ಆದರೆ ಇಂದು ಶೈಕ್ಷಣಿಕ ಕ್ಷೇತ್ರವಾಗಿ ಬೆಳೆದಿದೆ. ಹಣ ಮಾಡುವುದು ಮುಖ್ಯವಲ್ಲ, ಸಮಾಜಕ್ಕೆ ಸೇವೆ ಮಾಡುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ತಂದೆ-ತಾಯಿಗಳಿಗಿಂತ ಹೆಚ್ಚು ಮೇಷ್ಟ್ರು ಸಂತೋಷ ಪಡುತ್ತಾರೆ’ ಎಂದು ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ ಹೇಳಿದರು.</p>.<p>‘ಎ.ವಿ.ಕೆ ಕಾಲೇಜು ತರಗತಿಗಳ ಪಾಠಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಯಾವುದನ್ನು ಓದಬೇಕು, ಯಾವುದನ್ನು ಓದಬಾರದು ಎನ್ನುವುದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹಳ ಮುಖ್ಯ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ತಿಳಿಸಿದರು.</p>.<p>ಐಕ್ಯೂಎಸಿ ಸಂಯೋಜಕ ಪ್ರೊ. ಶಿವಕುಮಾರ್ ಆರ್.ಆರ್. ಇದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಿ.ಜೆ. ನಾಗವೇಣಿ, ಸ್ವಾಗತಿಸಿದರು. ಸೈಯಿದ್ ಸಾನಿಯ ವಂದಿಸಿದರು. ಸಹನಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>