<p><strong>ಜಗಳೂರು</strong>: ಯೂರಿಯಾ ರಸಗೊಬ್ಬರ ಪೂರೈಕೆಗೆ ಆಗ್ರಹಿಸಿ ರೈತರು ಪಟ್ಟಣದಲ್ಲಿ ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಒಂದು ವಾರದಿಂದ ತಾಲೂಕಿನಲ್ಲಿ ಯೂರಿಯಾಗಾಗಿ ರೈತರು ರಸಗೊಬ್ಬರ ಮಾರಾಟದ ಖಾಸಗಿ ಕೇಂದ್ರಗಳಿಗೆ ಮುಗಿ ಬೀಳುತ್ತಿದ್ದಾರೆ. ಶನಿವಾರ ಸುಮಾರು 200 ಟನ್ ಯೂರಿಯಾ ತಾಲ್ಲೂಕಿಗೆ ಪೂರೈಕೆ ಮಾಡಲಾಗಿತ್ತು. ಆದರೂ ಗೊಬ್ಬರ ಸಿಗದೆ ನೂರಾರು ರೈತರು ಬರಿಗೈಲಿ ಮರಳಿದ್ದರು.</p>.<p>‘ತಾಲ್ಲೂಕಿನಲ್ಲಿ ಉತ್ತಮ ಪ್ರಮಾಣದ ಮಳೆಯಾಗುತ್ತಿದ್ದು, ಸಕಾಲದಲ್ಲಿ ಅಗತ್ಯ ಯೂರಿಯಾ ಸಿಗದ ಕಾರಣ ಮೆಕ್ಕೆಜೋಳ ಬೆಳೆ ಬೆಳವಣಿಗೆ ಕುಂಠಿತವಾಗುತ್ತದೆ. ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿದ್ದಾರೆ. ಕೂಡಲೇ ಎಲ್ಲಾ ರೈತರಿಗೆ ಯೂರಿಯಾ ಪೂರೈಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ತಾಲ್ಲೂಕಿನಲ್ಲಿ ಹಂತ ಹಂತವಾಗಿ ಯೂರಿಯಾ ಪೂರೈಸಲಾಗುವುದು. ರೈತರು ಅಗತ್ಯಕ್ಕಿಂತ ಹೆಚ್ಚುವರಿಯಾಗಿ ರಸಗೊಬ್ಬರ ಬಳಕೆಮಾಡುತ್ತಿದ್ದಾರೆ. ಮಿತವಾಗಿ ಬಳಸಬೇಕು. ರೈತರು ಸಹಕರಿಸಬೇಕು ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಮನವಿ ಮಾಡಿದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ ಇದ್ದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ (ವಾಸುದೇವ ಮೇಟಿ) ಬಣದ ತಾಲ್ಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ, ಮುಖಂಡರಾದ ಮಲ್ಲೇಶ್, ತಿಪ್ಪೇಸ್ವಾಮಿ, ಲೋಕೇಶ್ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ಯೂರಿಯಾ ರಸಗೊಬ್ಬರ ಪೂರೈಕೆಗೆ ಆಗ್ರಹಿಸಿ ರೈತರು ಪಟ್ಟಣದಲ್ಲಿ ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಒಂದು ವಾರದಿಂದ ತಾಲೂಕಿನಲ್ಲಿ ಯೂರಿಯಾಗಾಗಿ ರೈತರು ರಸಗೊಬ್ಬರ ಮಾರಾಟದ ಖಾಸಗಿ ಕೇಂದ್ರಗಳಿಗೆ ಮುಗಿ ಬೀಳುತ್ತಿದ್ದಾರೆ. ಶನಿವಾರ ಸುಮಾರು 200 ಟನ್ ಯೂರಿಯಾ ತಾಲ್ಲೂಕಿಗೆ ಪೂರೈಕೆ ಮಾಡಲಾಗಿತ್ತು. ಆದರೂ ಗೊಬ್ಬರ ಸಿಗದೆ ನೂರಾರು ರೈತರು ಬರಿಗೈಲಿ ಮರಳಿದ್ದರು.</p>.<p>‘ತಾಲ್ಲೂಕಿನಲ್ಲಿ ಉತ್ತಮ ಪ್ರಮಾಣದ ಮಳೆಯಾಗುತ್ತಿದ್ದು, ಸಕಾಲದಲ್ಲಿ ಅಗತ್ಯ ಯೂರಿಯಾ ಸಿಗದ ಕಾರಣ ಮೆಕ್ಕೆಜೋಳ ಬೆಳೆ ಬೆಳವಣಿಗೆ ಕುಂಠಿತವಾಗುತ್ತದೆ. ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸಿದ್ದಾರೆ. ಕೂಡಲೇ ಎಲ್ಲಾ ರೈತರಿಗೆ ಯೂರಿಯಾ ಪೂರೈಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ತಾಲ್ಲೂಕಿನಲ್ಲಿ ಹಂತ ಹಂತವಾಗಿ ಯೂರಿಯಾ ಪೂರೈಸಲಾಗುವುದು. ರೈತರು ಅಗತ್ಯಕ್ಕಿಂತ ಹೆಚ್ಚುವರಿಯಾಗಿ ರಸಗೊಬ್ಬರ ಬಳಕೆಮಾಡುತ್ತಿದ್ದಾರೆ. ಮಿತವಾಗಿ ಬಳಸಬೇಕು. ರೈತರು ಸಹಕರಿಸಬೇಕು ಎಂದು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಮನವಿ ಮಾಡಿದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ ಇದ್ದರು.</p>.<p>ಕರ್ನಾಟಕ ರಾಜ್ಯ ರೈತ ಸಂಘ (ವಾಸುದೇವ ಮೇಟಿ) ಬಣದ ತಾಲ್ಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ, ಮುಖಂಡರಾದ ಮಲ್ಲೇಶ್, ತಿಪ್ಪೇಸ್ವಾಮಿ, ಲೋಕೇಶ್ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>