<p><strong>ಸಂತೇಬೆನ್ನೂರು</strong>: ‘ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೋಯಾಬೀನ್ ಉತ್ತಮ ದ್ವಿದಳ ಧಾನ್ಯ ಬೆಳೆ. ಮೆಕ್ಕೆಜೋಳಕ್ಕೆ ಪರ್ಯಾಯವಾಗಿ ಸೋಯಾಬೀನ್ ಬೆಳೆಯಿರಿ’ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಬಿ.ಒ.ಮಲ್ಲಿಕಾರ್ಜುನ ಹೇಳಿದರು.</p>.<p>ಸಮೀಪದ ನುಗ್ಗಿಹಳ್ಳಿ ಗ್ರಾಮದಲ್ಲಿ ಸೋಮವಾರ ರೈತ ಸಂಪರ್ಕ ಕೇಂದ್ರ ಹಾಗೂ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಸೋಯಾಬೀನ್ ಸಮಗ್ರ ಬೆಳೆ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೋಯಾಬೀನ್ ಶೇ 40ರಷ್ಟು ಪ್ರೊಟೀನ್ ಹೊಂದಿರುವ ಏಕೈಕ ಬೆಳೆ. ಇದರ ಹೊಸ ತಳಿ ಡಿಎಸ್ಬಿ 34 ಪರಿಚಯಿಸಲಾಗುತ್ತಿದೆ. ಕೇವಲ 90 ದಿನಗಳಲ್ಲಿ ಉತ್ತಮ ಇಳುವರಿ ಕೊಡಲಿದೆ. ಬಿತ್ತನೆ ಸಂದರ್ಭದಲ್ಲಿ ಪ್ರತಿ ಕೆ.ಜಿ. ಬೀಜಕ್ಕೆ 4 ಗ್ರಾಂ ಟ್ರೈಕೋಡರ್ಮದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕೃಷಿ ಇಲಾಖೆ ಸೌಲಭ್ಯಗಳು ಹಾಗೂ ವಿಜ್ಞಾನಿಗಳು ತಿಳಿಸಿದ ತಾಂತ್ರಿಕತೆ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಕುಮಾರ್ ತಿಳಿಸಿದರು.</p>.<p>ವಿಸ್ತರಣಾ ತಜ್ಞ ರಘುರಾಜ್, ಕೃಷಿ ಇಲಾಖೆ ಸಿಬ್ಬಂದಿ, ಪ್ರಗತಿಪರ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು</strong>: ‘ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೋಯಾಬೀನ್ ಉತ್ತಮ ದ್ವಿದಳ ಧಾನ್ಯ ಬೆಳೆ. ಮೆಕ್ಕೆಜೋಳಕ್ಕೆ ಪರ್ಯಾಯವಾಗಿ ಸೋಯಾಬೀನ್ ಬೆಳೆಯಿರಿ’ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಬಿ.ಒ.ಮಲ್ಲಿಕಾರ್ಜುನ ಹೇಳಿದರು.</p>.<p>ಸಮೀಪದ ನುಗ್ಗಿಹಳ್ಳಿ ಗ್ರಾಮದಲ್ಲಿ ಸೋಮವಾರ ರೈತ ಸಂಪರ್ಕ ಕೇಂದ್ರ ಹಾಗೂ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಸೋಯಾಬೀನ್ ಸಮಗ್ರ ಬೆಳೆ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸೋಯಾಬೀನ್ ಶೇ 40ರಷ್ಟು ಪ್ರೊಟೀನ್ ಹೊಂದಿರುವ ಏಕೈಕ ಬೆಳೆ. ಇದರ ಹೊಸ ತಳಿ ಡಿಎಸ್ಬಿ 34 ಪರಿಚಯಿಸಲಾಗುತ್ತಿದೆ. ಕೇವಲ 90 ದಿನಗಳಲ್ಲಿ ಉತ್ತಮ ಇಳುವರಿ ಕೊಡಲಿದೆ. ಬಿತ್ತನೆ ಸಂದರ್ಭದಲ್ಲಿ ಪ್ರತಿ ಕೆ.ಜಿ. ಬೀಜಕ್ಕೆ 4 ಗ್ರಾಂ ಟ್ರೈಕೋಡರ್ಮದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕೃಷಿ ಇಲಾಖೆ ಸೌಲಭ್ಯಗಳು ಹಾಗೂ ವಿಜ್ಞಾನಿಗಳು ತಿಳಿಸಿದ ತಾಂತ್ರಿಕತೆ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಕುಮಾರ್ ತಿಳಿಸಿದರು.</p>.<p>ವಿಸ್ತರಣಾ ತಜ್ಞ ರಘುರಾಜ್, ಕೃಷಿ ಇಲಾಖೆ ಸಿಬ್ಬಂದಿ, ಪ್ರಗತಿಪರ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>