ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಲು ಆಗ್ರಹ

Last Updated 6 ಅಕ್ಟೋಬರ್ 2020, 16:02 IST
ಅಕ್ಷರ ಗಾತ್ರ

ದಾವಣಗೆರೆ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿ 14 ದಿನಗಳ ವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದ ಯೋಗಿ ಆದಿತ್ಯಾನಾಥ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜಿಲ್ಲಾ ವಾಲ್ಮಿಕಿ ನಾಯಕ ಸಮಾಜ ಆಗ್ರಹಿಸಿದೆ.

ಅತ್ಯಾಚಾರ ಮತ್ತು ಸಾವು ಖಂಡಿಸಿ ಮಂಗಳವಾರ ಇಲ್ಲಿನ ನಾಯಕ ಹಾಸ್ಟೆಲ್‌ ಬಳಿ ಪ್ರತಿಭಟನೆ ನಡೆಸಿದರು.

ಆರೋಪಿಗಳಾದ ರಾಮು, ಲವಕುಶ, ರವಿಗೆ ಕಠಿಣ ಶಿಕ್ಷೆ ವಿಧಿಸಿಬೇಕು. ಸರ್ಕಾರವನ್ನು ವಜಾ ಮಾಡುವುದರ ಜತೆಗೆ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಪೊಲೀಸ್‌ ಅಧಿಕಾರಿಯನ್ನು ಕೂಡಾ ವಜಾ ಮಾಡಬೇಕು. ಯುವತಿಯ ಕುಟುಂಬಕ್ಕೆ ಪರಿಹಾರ ಮತ್ತು ಭದ್ರತೆ ಒದಗಿಸಬೇಕು. ಕುಟುಂಬದ ಯಾರಿಗಾದರೂ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆ.ಎಚ್. ಓಬಳಪ್ಪ, ಹದಡಿ ಹಾಲೇಶಪ್ಪ, ಬಿ. ವೀರಣ್ಣ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT