<p><strong>ಹರಿಹರ:</strong> ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಆದೇಶದಂತೆ ನಗರದ ದೊಡ್ಡಿಬೀದಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಸೇರಿದ ಜಾಗದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸಿದ್ದರೆನ್ನಲಾದ ವಾಣಿಜ್ಯ ಮಳಿಗೆಗಳನ್ನು ಅಧಿಕಾರಿಗಳು ಮಂಗಳವಾರ ಸ್ವಾಧೀನ ಪಡಿಸಿಕೊಂಡರು.</p>.<p>ಮಂಗಳವಾರ ಬೆಳಿಗ್ಗೆ 9ಕ್ಕೆ ದೊಡ್ಡಿಬೀದಿಯ ಗರಡಿಮನೆಯ ಅಕ್ಕಪಕ್ಕದಲ್ಲಿ ನಿರ್ಮಿಸಿದ್ದ 11 ಮಳಿಗೆಗಳಿಗೆ ಅಧಿಕಾರಿಗಳ ತಂಡ ಬೀಗ ಹಾಕಿ ಆರೋಗ್ಯ ಇಲಾಖೆ ಸುಪರ್ದಿಗೆ ವಹಿಸಿದರು.</p>.<p>ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಾಣಿಜ್ಯ ಸಂಕೀರ್ಣ ನಿರ್ಮಿಸಿದನ್ನು ಪ್ರಶ್ನಿಸಿ ಆರೋಗ್ಯ ಇಲಾಖೆ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಕೆಲವು ವರ್ಷಗಳ ಕಾಲ ವಿಚಾರಣೆ ನಡೆದ ನಂತರ 2021ರಲ್ಲಿ ಪ್ರಕರಣವನ್ನು ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.</p>.<p>ಆರೋಗ್ಯ ಇಲಾಖೆಗೆ ಸೇರಿದ 2.25 ಎಕರೆ ಜಮೀನಿನಲ್ಲಿ ಎರಡೂವರೆ ಗುಂಟೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದಾವೆ ಹೂಡಲಾಗಿತ್ತು. ಈಗ ಆ ಜಾಗವನ್ನು ಜುಲೈ 18, 2024ರ ನ್ಯಾಯಾಲಯದ ಆದೇಶದ ಪ್ರಕಾರ ಸ್ವಾಧೀನ ಮಾಡಿಕೊಳ್ಳಲಾಯಿತು. ಮುಂಚೆಯೇ ವಿಷಯ ತಿಳಿದಿದ್ದ ವ್ಯಾಪಾರಿಗಳು ತಮ್ಮ ವಸ್ತುಗಳನ್ನು ಮಳಿಗೆಗಳಿಂದ ಸಾಗಿಸಿದ್ದರು. ಕೆಲವು ಮಳಿಗೆಗಳಲ್ಲಿದ್ದ ವಸ್ತುಗಳನ್ನು ಅಧಿಕಾರಿಗಳು ಸ್ಥಳಕ್ಕೆ ಬಂದಾಗ ಹೊರಕ್ಕೆ ಸಾಗಿಸಿದರು.</p>.<p>ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಗುರುಬಸವರಾಜ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಎಲ್.ಹನುಮನಾಯ್ಕ, ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ, ನಗರಠಾಣೆ ಪಿಎಸ್ಐ ಶ್ರೀಪತಿ ಗಿನ್ನಿ, ಕಂದಾಯ ಅಧಿಕಾರಿ ರಮೇಶ್, ಹಿರಿಯ ಆರೋಗ್ಯಾಧಿಕಾರಿ ಸಂತೋಷ್ ನಾಯ್ಕ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಆದೇಶದಂತೆ ನಗರದ ದೊಡ್ಡಿಬೀದಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಸೇರಿದ ಜಾಗದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸಿದ್ದರೆನ್ನಲಾದ ವಾಣಿಜ್ಯ ಮಳಿಗೆಗಳನ್ನು ಅಧಿಕಾರಿಗಳು ಮಂಗಳವಾರ ಸ್ವಾಧೀನ ಪಡಿಸಿಕೊಂಡರು.</p>.<p>ಮಂಗಳವಾರ ಬೆಳಿಗ್ಗೆ 9ಕ್ಕೆ ದೊಡ್ಡಿಬೀದಿಯ ಗರಡಿಮನೆಯ ಅಕ್ಕಪಕ್ಕದಲ್ಲಿ ನಿರ್ಮಿಸಿದ್ದ 11 ಮಳಿಗೆಗಳಿಗೆ ಅಧಿಕಾರಿಗಳ ತಂಡ ಬೀಗ ಹಾಕಿ ಆರೋಗ್ಯ ಇಲಾಖೆ ಸುಪರ್ದಿಗೆ ವಹಿಸಿದರು.</p>.<p>ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಾಣಿಜ್ಯ ಸಂಕೀರ್ಣ ನಿರ್ಮಿಸಿದನ್ನು ಪ್ರಶ್ನಿಸಿ ಆರೋಗ್ಯ ಇಲಾಖೆ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಕೆಲವು ವರ್ಷಗಳ ಕಾಲ ವಿಚಾರಣೆ ನಡೆದ ನಂತರ 2021ರಲ್ಲಿ ಪ್ರಕರಣವನ್ನು ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.</p>.<p>ಆರೋಗ್ಯ ಇಲಾಖೆಗೆ ಸೇರಿದ 2.25 ಎಕರೆ ಜಮೀನಿನಲ್ಲಿ ಎರಡೂವರೆ ಗುಂಟೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ದಾವೆ ಹೂಡಲಾಗಿತ್ತು. ಈಗ ಆ ಜಾಗವನ್ನು ಜುಲೈ 18, 2024ರ ನ್ಯಾಯಾಲಯದ ಆದೇಶದ ಪ್ರಕಾರ ಸ್ವಾಧೀನ ಮಾಡಿಕೊಳ್ಳಲಾಯಿತು. ಮುಂಚೆಯೇ ವಿಷಯ ತಿಳಿದಿದ್ದ ವ್ಯಾಪಾರಿಗಳು ತಮ್ಮ ವಸ್ತುಗಳನ್ನು ಮಳಿಗೆಗಳಿಂದ ಸಾಗಿಸಿದ್ದರು. ಕೆಲವು ಮಳಿಗೆಗಳಲ್ಲಿದ್ದ ವಸ್ತುಗಳನ್ನು ಅಧಿಕಾರಿಗಳು ಸ್ಥಳಕ್ಕೆ ಬಂದಾಗ ಹೊರಕ್ಕೆ ಸಾಗಿಸಿದರು.</p>.<p>ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಗುರುಬಸವರಾಜ್, ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಎಲ್.ಹನುಮನಾಯ್ಕ, ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ, ನಗರಠಾಣೆ ಪಿಎಸ್ಐ ಶ್ರೀಪತಿ ಗಿನ್ನಿ, ಕಂದಾಯ ಅಧಿಕಾರಿ ರಮೇಶ್, ಹಿರಿಯ ಆರೋಗ್ಯಾಧಿಕಾರಿ ಸಂತೋಷ್ ನಾಯ್ಕ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>