<p>ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯ ಅನ್ವಯ ಹಂಚಿಕೆಯಾದ ಕೋವಿಡ್ ನಿರೋಧಕ ಲಸಿಕೆಯನ್ನು ವಾರಿಯರ್ಗಳಿಗೆ ಕಾಲಮಿತಿಯಂತೆ ಒಂದು ಮತ್ತು ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಯಾರದ್ದೇ, ಯಾವುದೇ ಒತ್ತಡ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟನೆ ನೀಡಿದ್ದಾರೆ.</p>.<p>45 ವರ್ಷ ಮೇಲಿನವರಿಗೆ ಮೊದಲನೇ ಡೋಸ್ ನಿಗದಿಪಡಿಸಿದ ಅವಧಿ ಪೂರ್ಣಗೊಂಡ ನಂತರ ಎರಡನೇ ನೀಡುವಲ್ಲಿ ಕ್ರಮ ವಹಿಸಲಾಗುತ್ತಿದೆ. ಕಾಲಕಾಲಕ್ಕೆ ಸ್ವೀಕೃತವಾಗುವ ಸರ್ಕಾರದ ನಿರ್ದೇಶನಗಳಂತೆ ಲಸಿಕೆ ನೀಡಲಾಗುತ್ತಿದೆ. ಒಂದು ಲಸಿಕಾ ಮೇಳವನ್ನು ನಡೆಸಲಾಗಿದೆ. ಸರ್ಕಾರದಿಂದ ಹಂಚಿಕೆಯಾದ ಲಸಿಕೆಗಳನ್ನು ಬ್ಯಾನರ್ನಡಿ ಆಯೋಜಿಸಿ ನೀಡಲು ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತಕ್ಕೆ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಯಾವುದೇ ರೀತಿಯ ಒತ್ತಡ, ಶಿಫಾರಸು ಬಂದಿಲ್ಲ ಎಂದು ತಿಳಿಸಿದ್ದಾರೆ.</p>.<p>ಜಿಲ್ಲಾಡಳಿತವು ಮುಂಬರುವ ದಿನಗಳಲ್ಲಿ ಜಿಲ್ಲೆಯ ಲಸಿಕೆ ಬೇಡಿಕೆಯಂತೆ ಸರ್ಕಾರದ ನ್ಯಾಯಸಮ್ಮತವಾಗಿ ನಡೆಸಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಹಾಗೂ ನಾಗರಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯ ಅನ್ವಯ ಹಂಚಿಕೆಯಾದ ಕೋವಿಡ್ ನಿರೋಧಕ ಲಸಿಕೆಯನ್ನು ವಾರಿಯರ್ಗಳಿಗೆ ಕಾಲಮಿತಿಯಂತೆ ಒಂದು ಮತ್ತು ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಯಾರದ್ದೇ, ಯಾವುದೇ ಒತ್ತಡ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟನೆ ನೀಡಿದ್ದಾರೆ.</p>.<p>45 ವರ್ಷ ಮೇಲಿನವರಿಗೆ ಮೊದಲನೇ ಡೋಸ್ ನಿಗದಿಪಡಿಸಿದ ಅವಧಿ ಪೂರ್ಣಗೊಂಡ ನಂತರ ಎರಡನೇ ನೀಡುವಲ್ಲಿ ಕ್ರಮ ವಹಿಸಲಾಗುತ್ತಿದೆ. ಕಾಲಕಾಲಕ್ಕೆ ಸ್ವೀಕೃತವಾಗುವ ಸರ್ಕಾರದ ನಿರ್ದೇಶನಗಳಂತೆ ಲಸಿಕೆ ನೀಡಲಾಗುತ್ತಿದೆ. ಒಂದು ಲಸಿಕಾ ಮೇಳವನ್ನು ನಡೆಸಲಾಗಿದೆ. ಸರ್ಕಾರದಿಂದ ಹಂಚಿಕೆಯಾದ ಲಸಿಕೆಗಳನ್ನು ಬ್ಯಾನರ್ನಡಿ ಆಯೋಜಿಸಿ ನೀಡಲು ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತಕ್ಕೆ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಯಾವುದೇ ರೀತಿಯ ಒತ್ತಡ, ಶಿಫಾರಸು ಬಂದಿಲ್ಲ ಎಂದು ತಿಳಿಸಿದ್ದಾರೆ.</p>.<p>ಜಿಲ್ಲಾಡಳಿತವು ಮುಂಬರುವ ದಿನಗಳಲ್ಲಿ ಜಿಲ್ಲೆಯ ಲಸಿಕೆ ಬೇಡಿಕೆಯಂತೆ ಸರ್ಕಾರದ ನ್ಯಾಯಸಮ್ಮತವಾಗಿ ನಡೆಸಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಹಾಗೂ ನಾಗರಿಕರು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>