<p><strong>ದಾವಣಗೆರೆ:</strong> ‘ಕೊರೊನಾ ಬಂದರೂ ಮರಣ ಉಂಟಾಗದಂತೆ ನಮ್ಮನ್ನು ನಾವು ಕಾಪಾಡಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ನಗರದ ಮದಕರಿ ನಾಯಕ ವೃತ್ತದಲ್ಲಿರುವ ದುರ್ಗಾಂಬಿಕ ಪ್ರೌಢಶಾಲೆಯಲ್ಲಿ ಸುಭಿಕ್ಷಾ ಫೌಂಡೇಷನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಭಾನುವಾರ ಆಯೋಜಿಸಲಾಗಿದ್ದ ಲಸಿಕಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮೊದಲ ಸುತ್ತಿನಲ್ಲಿ ದುರ್ಗಾಂಬಿಕ ದೇವಸ್ಥಾನದ ಧರ್ಮದರ್ಶಿ ಚನ್ನಬಸಪ್ಪ, ಯಶವಂತರಾವ್ ಜಾಧವ್ ಮುಂತಾದವರು ಲಸಿಕೆ ಪಡೆದಿದ್ದಾರೆ. ಉಳಿದವರು ಕೂಡ ವದಂತಿಗಳಿಗೆ ಕಿವಿಕೊಡದೇ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಗೌಡ್ರು ಚನ್ನಬಸಪ್ಪ ಮಾತನಾಡಿ, ‘ಪ್ರಪಂಚದಾದ್ಯಂತ ಬಂದಿರುವ ಈ ಕಾಯಿಲೆ ಎಚ್ಚರ ತಪ್ಪಿದರೆ ಮಾರಕವಾಗುತ್ತದೆ. ಈಗಾಗಲೇ ಬಂದು ಹೋಗಿತ್ತು. ಈಗ ಮತ್ತೆ ಮರುಕಳಿಸಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಲಸಿಕೆ ಹಾಕಿಸಿಕೊಳ್ಳಿ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ’ ಎಂದರು.</p>.<p>ಡಿಎಚ್ಒ ಡಾ.ನಾಗರಾಜ್, ಆರ್ಸಿಎಚ್ಒ ಡಾ. ಮೀನಾಕ್ಷಿ, ಪಾಲಿಕೆ ಸದಸ್ಯೆ ಗಾಯಿತ್ರಿ ಖಂಡೋಜಿ ರಾವ್, ಸುಭಿಕ್ಷಾ ಫೌಂಡೇಶನ್ನ ಸೌಮ್ಯಾ, ಭಾಗ್ಯ, ಆಶಾ ಮರಿಯೋಜಿರಾವ್, ಹನುಮಂತ ರಾವ್ ಸಾವಂತ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಕೊರೊನಾ ಬಂದರೂ ಮರಣ ಉಂಟಾಗದಂತೆ ನಮ್ಮನ್ನು ನಾವು ಕಾಪಾಡಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ನಗರದ ಮದಕರಿ ನಾಯಕ ವೃತ್ತದಲ್ಲಿರುವ ದುರ್ಗಾಂಬಿಕ ಪ್ರೌಢಶಾಲೆಯಲ್ಲಿ ಸುಭಿಕ್ಷಾ ಫೌಂಡೇಷನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಭಾನುವಾರ ಆಯೋಜಿಸಲಾಗಿದ್ದ ಲಸಿಕಾ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮೊದಲ ಸುತ್ತಿನಲ್ಲಿ ದುರ್ಗಾಂಬಿಕ ದೇವಸ್ಥಾನದ ಧರ್ಮದರ್ಶಿ ಚನ್ನಬಸಪ್ಪ, ಯಶವಂತರಾವ್ ಜಾಧವ್ ಮುಂತಾದವರು ಲಸಿಕೆ ಪಡೆದಿದ್ದಾರೆ. ಉಳಿದವರು ಕೂಡ ವದಂತಿಗಳಿಗೆ ಕಿವಿಕೊಡದೇ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ಗೌಡ್ರು ಚನ್ನಬಸಪ್ಪ ಮಾತನಾಡಿ, ‘ಪ್ರಪಂಚದಾದ್ಯಂತ ಬಂದಿರುವ ಈ ಕಾಯಿಲೆ ಎಚ್ಚರ ತಪ್ಪಿದರೆ ಮಾರಕವಾಗುತ್ತದೆ. ಈಗಾಗಲೇ ಬಂದು ಹೋಗಿತ್ತು. ಈಗ ಮತ್ತೆ ಮರುಕಳಿಸಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಲಸಿಕೆ ಹಾಕಿಸಿಕೊಳ್ಳಿ ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ’ ಎಂದರು.</p>.<p>ಡಿಎಚ್ಒ ಡಾ.ನಾಗರಾಜ್, ಆರ್ಸಿಎಚ್ಒ ಡಾ. ಮೀನಾಕ್ಷಿ, ಪಾಲಿಕೆ ಸದಸ್ಯೆ ಗಾಯಿತ್ರಿ ಖಂಡೋಜಿ ರಾವ್, ಸುಭಿಕ್ಷಾ ಫೌಂಡೇಶನ್ನ ಸೌಮ್ಯಾ, ಭಾಗ್ಯ, ಆಶಾ ಮರಿಯೋಜಿರಾವ್, ಹನುಮಂತ ರಾವ್ ಸಾವಂತ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>