ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಹರಜಾತ್ರೆಯಲ್ಲಿ ಭಾಗವಹಿಸಿದ್ದರು. ಅವರೆಲ್ಲರಿಗೆ ದಾಸೋಹ, ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸಿದ್ದರಿಂದ ಗಣನೀಯ ಪ್ರಮಾಣದ ತ್ಯಾಜ್ಯ ಸೃಷ್ಟಿಯಾಗಿತ್ತು. ಸೋಮವಾರ ಬೆಳಿಗ್ಗೆ ನಗರಸಭೆ ಪೌರ ಕಾರ್ಮಿಕರು ತಮ್ಮ ಸ್ವಚ್ಚತಾ ಪರಿಕರಗಳೊಂದಿಗೆ ಗುರುಪೀಠಕ್ಕೆ ಆಗಮಿಸಿದ್ದರು. ಅವರೊಂದಿಗೆ ವಚನಾನಂದ ಶ್ರೀಗಳು ಹಾಗೂ ಭಕ್ತರೂ ಕಸ ಗುಡಿಸಿದರು.