ದಾವಣಗೆರೆ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜನರ ಬೆಂಬಲವೇ ಕಾರಣ. ಶೇ 80ರಷ್ಟು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರಿದ್ದಾರೆ. ಹೀಗಿರುವಾಗ ಸಂಪುಟ ಪುನರ್ ರಚನೆಯಲ್ಲಿ ಸಮಾಜದವರಿಗೆ ಆದ್ಯತೆ ನೀಡಿ, ಇಬ್ಬರು, ಮೂವರಿಗೆ ಸಚಿವಸ್ಥಾನ ನೀಡಲೇಬೇಕು’ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.