ಹರಜಾತ್ರೆಯ ಎರಡನೇ ದಿನ ಬುಧವಾರ ನಡೆದ ಮಹಿಳಾ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಮಂಗಳವಾರ ’ಪಂಚಮಸಾಲಿಯ ಮೂವರನ್ನು ಸಚಿವರನ್ನಾಗಿ ಮಾಡದೇ ಇದ್ದರೆ ಸಮುದಾಯವೇ ಕೈಬಿಡಲಿದೆ' ಎಂದು ಬೆದರಿಕೆಯ ಧಾಟಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಎಚ್ಚರಿಸಿದ್ದರು. ಆಗ ಮುಖ್ಯಮಂತ್ರಿ ಅಸಮಾಧಾನಗೊಂಡು ಸಮಾರಂಭದ ನಡುವೆಯೇ ಹೊರಡಲು ಅನುವಾಗಿದ್ದರು. ಆಮೇಲೆ ಅವರು ಭಾವುಕರಾಗಿ ಮಾತನಾಡಿ, ತಮ್ಮ ಅಸಹಾಯಕತೆ ತೋಡಿಕೊಂಡಿದ್ದರು. ಈ ಕುರಿತು ಅನೇಕ ರಾಜಕಾರಣಿಗಳು, ಸ್ವಾಮೀಜಿಗಳು ವಚನಾನಂದಶ್ರೀ ನಡೆಯನ್ನು ಖಂಡಿಸಿದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಕ್ಷಮೆ ಕೋರಿದರು.