ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಅಂತಿಮಗೊಳಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅವರ ಹೆಸರು ಘೋಷಣೆ ಮಾಡದಿದ್ದರೆ, ಇತಿಹಾಸದಲ್ಲಿ ಶೌರ್ಯಕ್ಕೆ ಹೆಸರಾದ ಕೆಳದಿ ರಾಣಿ ಚನ್ನಮ್ಮ ಅವರ ಹೆಸರು ಇಡಬೇಕು’ ಎಂದು ಒತ್ತಾಯಿಸಿದರು.