ಬೆಳಗಿನ ಜಾವ 3.30ರಿಂದಲೇ ಧಾರ್ಮಿಕ ವಿಧಿ, ವಿಧಾನಗಳು ಆರಂಭವಾದವು. ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಆಷ್ಟೋತ್ತರ ನಾಮವಳಿಯ ನಂತರ ವಿವಿಧ ಹೂಗಳಿಂದ ಅಲಂಕರಿಸಿ, 5.30ಕ್ಕೆ ಮಹಾಮಂಗಳಾರತಿ ನೆರವೇರಿಸಲಾಯಿತು. ಭಕ್ತರು ನಸುಕಿನ ಕೊರೆವ ಚಳಿಯಲ್ಲೂ ಸಾಲಾಗಿ ನಿಂತು ಸ್ವಾಮಿಯ ದರ್ಶನ ಪಡೆದರು.