<p><strong>ಹರಿಹರ (ದಾವಣಗೆರೆ):</strong> ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯುತ್ತಿರುವ 8ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಮಹರ್ಷಿ ವಾಲ್ಮೀಕಿ ರಥೋತ್ಸವ ಸೋಮವಾರ ಬೆಳಿಗ್ಗೆ ಭವ್ಯವಾಗಿ ನೆರವೇರಿತು.</p><p>ತರಹೇವಾರಿ ಪುಷ್ಪಗಳಿಂದ ಅಲಂಕೃತಗೊಂಡ ರಥಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಾಡಿನ ವಿವಿಧ ಮಠಾಧೀಶರು ಚಾಲನೆ ನೀಡಿದರು. 63 ಅಡಿ ಎತ್ತರದ ರಿಮೋಟ್ ನಿಯಂತ್ರಿತ ರಥವನ್ನು ಭಕ್ತರು ಎಳೆದರು. </p><p>ಮಠದ ಆವರಣದಿಂದ ಹೊರಟ ರಥದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು. ಈ ಭವ್ಯ ದೃಶ್ಯವನ್ನು ಕಣ್ತುಂಬಿಕೊಂಡ ಭಕ್ತರು ವಾಲ್ಮೀಕಿ ಮಹರ್ಷಿಗೆ ಜೈಕಾರ ಮೊಳಗಿಸಿದರು. ರಥೋತ್ಸವದ ಮುಂದೆ ಜಗ್ಗಲಿಗೆ, ಮರಗಾಲು ಕುಣಿತ ಸೇರಿದಂತೆ ಕಲಾತಂಡಗಳು ಸಾಗಿದವು. ರಥವು ಸಂಜೆ ಸ್ವಸ್ಥಾನಕ್ಕೆ ಮರಳಲಿದೆ.</p><p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸೇರಿ ಅನೇಕ ಮಠಾಧೀಶರು ರಥೋತ್ಸವಕ್ಕೆ ಸಾಕ್ಷಿಯಾದರು.</p><p>ಶಾಸಕ ಬಿ.ಪಿ. ಹರೀಶ್, ‘ಮಠ ಈ ಹಂತಕ್ಕೆ ಬೆಳೆಯಲು ಚಳ್ಳಕೆರೆಯ ಮಾಜಿ ಸಚಿವ ತಿಪ್ಪೇಸ್ವಾಮಿ ಅವರೇ ಕಾರಣ. ಹಿರಿಯರಾದ ಓಬಳಪ್ಪ, ಜಾರಕಿಹೊಳಿ ಕುಟುಂಬ ಮಠದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದೆ. ಪರಿಶಿಷ್ಟ ಪಂಗಡ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಸಾಂಘಿಕವಾಗಿ ನಡೆಯುತ್ತಿದೆ’ ಎಂದು ಸ್ಮರಿಸಿದರು.</p><p>‘ವಾಲ್ಮೀಕಿ ಸಮುದಾಯನ್ನು ಮಠಾಧೀಶರು ಹೇಗೆ ಮುನ್ನಡೆಸಬಹುದು ಎಂಬ ಕುತೂಹಲವಿತ್ತು. ಈ ಕಾರ್ಯವನ್ನು ಪ್ರಸನ್ನಾನಂದ ಸ್ವಾಮೀಜಿ ಯಶಸ್ವಿಯಾಗಿ ನೆರವೇರಿಸುತ್ತಿದ್ದಾರೆ. ಸಮುದಾಯದ ಏಳಿಗೆಗೆ ಪೀಠಾಧ್ಯಕ್ಷರು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.</p><p>ಸಂಸದ ಕುಮಾರ ನಾಯಕ, ಶಾಸಕರಾದ ಕೆ.ಎಸ್. ಬಸವಂತಪ್ಪ, ಕೃಷ್ಣನಾಯ್ಕ, ಅರವಿಂದ ಬೆಲ್ಲದ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ಬುಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಸಂಸದ ಪ್ರತಾಪ ಸಿಂಹ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ (ದಾವಣಗೆರೆ):</strong> ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯುತ್ತಿರುವ 8ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಮಹರ್ಷಿ ವಾಲ್ಮೀಕಿ ರಥೋತ್ಸವ ಸೋಮವಾರ ಬೆಳಿಗ್ಗೆ ಭವ್ಯವಾಗಿ ನೆರವೇರಿತು.</p><p>ತರಹೇವಾರಿ ಪುಷ್ಪಗಳಿಂದ ಅಲಂಕೃತಗೊಂಡ ರಥಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಾಡಿನ ವಿವಿಧ ಮಠಾಧೀಶರು ಚಾಲನೆ ನೀಡಿದರು. 63 ಅಡಿ ಎತ್ತರದ ರಿಮೋಟ್ ನಿಯಂತ್ರಿತ ರಥವನ್ನು ಭಕ್ತರು ಎಳೆದರು. </p><p>ಮಠದ ಆವರಣದಿಂದ ಹೊರಟ ರಥದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು. ಈ ಭವ್ಯ ದೃಶ್ಯವನ್ನು ಕಣ್ತುಂಬಿಕೊಂಡ ಭಕ್ತರು ವಾಲ್ಮೀಕಿ ಮಹರ್ಷಿಗೆ ಜೈಕಾರ ಮೊಳಗಿಸಿದರು. ರಥೋತ್ಸವದ ಮುಂದೆ ಜಗ್ಗಲಿಗೆ, ಮರಗಾಲು ಕುಣಿತ ಸೇರಿದಂತೆ ಕಲಾತಂಡಗಳು ಸಾಗಿದವು. ರಥವು ಸಂಜೆ ಸ್ವಸ್ಥಾನಕ್ಕೆ ಮರಳಲಿದೆ.</p><p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸೇರಿ ಅನೇಕ ಮಠಾಧೀಶರು ರಥೋತ್ಸವಕ್ಕೆ ಸಾಕ್ಷಿಯಾದರು.</p><p>ಶಾಸಕ ಬಿ.ಪಿ. ಹರೀಶ್, ‘ಮಠ ಈ ಹಂತಕ್ಕೆ ಬೆಳೆಯಲು ಚಳ್ಳಕೆರೆಯ ಮಾಜಿ ಸಚಿವ ತಿಪ್ಪೇಸ್ವಾಮಿ ಅವರೇ ಕಾರಣ. ಹಿರಿಯರಾದ ಓಬಳಪ್ಪ, ಜಾರಕಿಹೊಳಿ ಕುಟುಂಬ ಮಠದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದೆ. ಪರಿಶಿಷ್ಟ ಪಂಗಡ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಸಾಂಘಿಕವಾಗಿ ನಡೆಯುತ್ತಿದೆ’ ಎಂದು ಸ್ಮರಿಸಿದರು.</p><p>‘ವಾಲ್ಮೀಕಿ ಸಮುದಾಯನ್ನು ಮಠಾಧೀಶರು ಹೇಗೆ ಮುನ್ನಡೆಸಬಹುದು ಎಂಬ ಕುತೂಹಲವಿತ್ತು. ಈ ಕಾರ್ಯವನ್ನು ಪ್ರಸನ್ನಾನಂದ ಸ್ವಾಮೀಜಿ ಯಶಸ್ವಿಯಾಗಿ ನೆರವೇರಿಸುತ್ತಿದ್ದಾರೆ. ಸಮುದಾಯದ ಏಳಿಗೆಗೆ ಪೀಠಾಧ್ಯಕ್ಷರು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.</p><p>ಸಂಸದ ಕುಮಾರ ನಾಯಕ, ಶಾಸಕರಾದ ಕೆ.ಎಸ್. ಬಸವಂತಪ್ಪ, ಕೃಷ್ಣನಾಯ್ಕ, ಅರವಿಂದ ಬೆಲ್ಲದ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ಬುಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಸಂಸದ ಪ್ರತಾಪ ಸಿಂಹ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>