ವಾಲ್ಮೀಕಿ ಜಾತ್ರೆಯ ಅಂಗವಾಗಿ ಹರಪನಹಳ್ಳಿಯಲ್ಲಿ ಸಮಾಜದ ಸಭೆಯಲ್ಲಿ ಭಾಗವಹಿಸಬೇಕಿರುವುದರಿಂದ ನಿಗದಿಗಿಂತ ಮೊದಲೇ ವಾಲ್ಮೀಕಿ ಪೀಠಕ್ಕೆ ಬರುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರು ನಡ್ಡಾ ಅವರಿಗೆ ಸಂದೇಶ ರವಾನಿಸಿದ್ದರು. ಆದರೆ, ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕಗುರು ಪೀಠದ ನಿರಂಜನಾನಂದ ಪುರಿ ಶ್ರೀಗಳೂ ತಮ್ಮ ಮಠಕ್ಕೆ ಬೇಗನೆ ಬರುವಂತೆ ಕೋರಿದ್ದರಿಂದ ನಡ್ಡಾ ಅವರು ಮೊದಲು ಕನಕ ಗುರುಪೀಠದ ಶಾಖಾ ಮಠಕ್ಕೆ ತೆರಳಿದರು.