ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಟಾಳ್ ಬ್ಲಾಕ್‌ಮೇಲ್ ವ್ಯಕ್ತಿ’

Last Updated 5 ಡಿಸೆಂಬರ್ 2020, 2:52 IST
ಅಕ್ಷರ ಗಾತ್ರ

ದಾವಣಗೆರೆ: ‘ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕನ್ನಡ ತಾಯಿ ಭುವನೇಶ್ವರಿ ಹೆಸರಿನಲ್ಲಿ ತಮ್ಮ ಸ್ವಾರ್ಥಕ್ಕಾಗಿಬ್ಲಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.

ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ‘ವಾಟಾಳ್ ನಾಗರಾಜ್ ಶಾಸಕರಾಗಿದ್ದಾಗ ಚಿಕ್ಕಪೇಟೆ ವರ್ತಕರಿಗೆ ಕಣ್ಣೀರು ಹಾಕಿಸಿದ್ದಾರೆ.ಇದನ್ನು ಮಾಡುವ ಬದಲು ನಿಮ್ಮ ಸ್ವಂತ ಸಂಪಾದನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ ತೋರಿಸಿ’ ಎಂದು ಸವಾಲು ಹಾಕಿದರು.

ನಾನು ನಿಯತ್ತಿನ ನಾಯಿ: ‘ದೇಶ, ರಾಜ್ಯಕ್ಕಾಗಿ, ಮತಕ್ಷೇತ್ರಕ್ಕಾಗಿ ನಾನು ನಿಯತ್ತಿನ ನಾಯಿ ಆಗುತ್ತೇನೆ. ನಾಯಿಗೆ ಇರುವ ನಿಯತ್ತು ಮನುಷ್ಯರಿಗೆ ಇಲ್ಲ’ ಎಂದು ವಾಟಾಳ್ ನಾಗರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT