<p><strong>ಹರಿಹರ (ದಾವಣಗೆರೆ)</strong>: ‘ಅಮಾನವೀಯವಾಗಿರುವ ವೈದಿಕ ಪದ್ಧತಿಯಿಂದಾಗಿ ಶೂದ್ರ ವರ್ಗದವರ ಜೊತೆಗೆ ಮಹಿಳೆಯರ ಶೋಷಣೆ ಎಗ್ಗಿಲ್ಲದೆ ನಡೆದಿದೆ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೋಮವಾರ ಇಲ್ಲಿ ಹೇಳಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸ್ಥಳೀಯ ಘಟಕ, ಸ್ಫೂರ್ತಿ ಚಾರಿಟಬಲ್ ಟ್ರಸ್ಟ್ ಇಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ನಿಮಿತ್ತ ಆಯೋಜಿಸಿದ್ದ ‘ಸದ್ಭಾವನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವೈದಿಕ ಪದ್ಧತಿ ಜಾರಿಯಲ್ಲಿದ್ದ ಕಾರಣಕ್ಕೆ ಈ ಹಿಂದೆ ಶೂದ್ರ ವರ್ಗದವರು ಗ್ರಾಮ ಪ್ರವೇಶಿಸುವಾಗ ತಮ್ಮ ಹಿಂದೆ ಪೊರಕೆ ಕಟ್ಟಿಕೊಳ್ಳಬೇಕಿತ್ತು. ಶಿಕ್ಷಣ, ಆರೋಗ್ಯ, ಧರ್ಮಾಚರಣೆಯಿಂದ ದೂರ ಇಡಲಾಗಿತ್ತು. ಎಲ್ಲ ಸಮುದಾಯದ ಮಹಿಳೆಯರನ್ನೂ ವೈದಿಕ ಪದ್ಧತಿಯಡಿ ಗುಲಾಮಗಿರಿಗೆ ತಳ್ಳಿ ಕೀಳಾಗಿ ಕಾಣಲಾಗುತ್ತಿತ್ತು’ ಎಂದು ತಿಳಿಸಿದರು. </p>.<p>‘ಸಂವಿಧಾನದ ಕಾರಣದಿಂದ ಶೂದ್ರ ವರ್ಗದವರ ಜೊತೆಗೆ ಎಲ್ಲ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಿರುವುದರಿಂದಲೇ ಅವರು ಸಾಂವಿಧಾನಿಕ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ (ದಾವಣಗೆರೆ)</strong>: ‘ಅಮಾನವೀಯವಾಗಿರುವ ವೈದಿಕ ಪದ್ಧತಿಯಿಂದಾಗಿ ಶೂದ್ರ ವರ್ಗದವರ ಜೊತೆಗೆ ಮಹಿಳೆಯರ ಶೋಷಣೆ ಎಗ್ಗಿಲ್ಲದೆ ನಡೆದಿದೆ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೋಮವಾರ ಇಲ್ಲಿ ಹೇಳಿದರು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸ್ಥಳೀಯ ಘಟಕ, ಸ್ಫೂರ್ತಿ ಚಾರಿಟಬಲ್ ಟ್ರಸ್ಟ್ ಇಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ನಿಮಿತ್ತ ಆಯೋಜಿಸಿದ್ದ ‘ಸದ್ಭಾವನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ವೈದಿಕ ಪದ್ಧತಿ ಜಾರಿಯಲ್ಲಿದ್ದ ಕಾರಣಕ್ಕೆ ಈ ಹಿಂದೆ ಶೂದ್ರ ವರ್ಗದವರು ಗ್ರಾಮ ಪ್ರವೇಶಿಸುವಾಗ ತಮ್ಮ ಹಿಂದೆ ಪೊರಕೆ ಕಟ್ಟಿಕೊಳ್ಳಬೇಕಿತ್ತು. ಶಿಕ್ಷಣ, ಆರೋಗ್ಯ, ಧರ್ಮಾಚರಣೆಯಿಂದ ದೂರ ಇಡಲಾಗಿತ್ತು. ಎಲ್ಲ ಸಮುದಾಯದ ಮಹಿಳೆಯರನ್ನೂ ವೈದಿಕ ಪದ್ಧತಿಯಡಿ ಗುಲಾಮಗಿರಿಗೆ ತಳ್ಳಿ ಕೀಳಾಗಿ ಕಾಣಲಾಗುತ್ತಿತ್ತು’ ಎಂದು ತಿಳಿಸಿದರು. </p>.<p>‘ಸಂವಿಧಾನದ ಕಾರಣದಿಂದ ಶೂದ್ರ ವರ್ಗದವರ ಜೊತೆಗೆ ಎಲ್ಲ ಸಮುದಾಯದ ಮಹಿಳೆಯರಿಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಿರುವುದರಿಂದಲೇ ಅವರು ಸಾಂವಿಧಾನಿಕ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>