<p><strong>ದಾವಣಗೆರೆ:</strong> ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಆಯತಪ್ಪಿ ಹಳಿಗೆ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ರಕ್ಷಣಾ ದಳದ (ಆರ್ಪಿಎಫ್) ಸಿಬ್ಬಂದಿ ರಕ್ಷಿಸಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p><p>ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯ ಎಚ್.ಎನ್.ಪ್ರಶಾಂತ್ (25) ರಕ್ಷಿಸಲ್ಪಟ್ಟ ಪ್ರಯಾಣಿಕ. ಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಸತೀಶ್ ಅವರು ಪ್ರಯಾಣಿಕನನ್ನು ರಕ್ಷಿಸಿದ್ದಾರೆ.</p><p>ಪ್ರಶಾಂತ್ ಅವರು ಯಶವಂತಪುರ–ವಿಜಯಪುರ ರೈಲಿನಲ್ಲಿ ಬೆಂಗಳೂರಿನಿಂದ ಭಾನುವಾರ ಪ್ರಯಾಣಿಸುತ್ತಿದ್ದರು. ರಾತ್ರಿ 11.32ಕ್ಕೆ ಈ ರೈಲು ದಾವಣಗೆರೆಗೆ ಬಂದಿತ್ತು. ಅಂಗವಿಕಲರಾಗಿರುವ ಪ್ರಶಾಂತ್ ರೈಲಿನಿಂದ ಕೆಳಗೆ ಇಳಿಯಲು ಮುಂದಾಗಿದ್ದರು. ಈ ವೇಳೆ ಅವರು ಆಯತಪ್ಪಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಪ್ರಯಾಣಿಕ ಮೆಟ್ಟಿಲಿನಿಂದ ಜಾರುತ್ತಿರುವುದನ್ನು ಗಮನಿಸಿದ ಹೆಡ್ಕಾನ್ಸ್ಟೆಬಲ್ ಸತೀಶ್ ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ಕೆಳಗೆ ಬೀಳುತ್ತಿದ್ದ ಅವರನ್ನು ಹಿಡಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರೂ ಕೈಜೋಡಿಸಿದ್ದಾರೆ. ಘಟನೆಯಿಂದ ಆಘಾತಗೊಂಡಿದ್ದ ಪ್ರಯಾಣಿಕನಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಆಯತಪ್ಪಿ ಹಳಿಗೆ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ರಕ್ಷಣಾ ದಳದ (ಆರ್ಪಿಎಫ್) ಸಿಬ್ಬಂದಿ ರಕ್ಷಿಸಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p><p>ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯ ಎಚ್.ಎನ್.ಪ್ರಶಾಂತ್ (25) ರಕ್ಷಿಸಲ್ಪಟ್ಟ ಪ್ರಯಾಣಿಕ. ಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಸತೀಶ್ ಅವರು ಪ್ರಯಾಣಿಕನನ್ನು ರಕ್ಷಿಸಿದ್ದಾರೆ.</p><p>ಪ್ರಶಾಂತ್ ಅವರು ಯಶವಂತಪುರ–ವಿಜಯಪುರ ರೈಲಿನಲ್ಲಿ ಬೆಂಗಳೂರಿನಿಂದ ಭಾನುವಾರ ಪ್ರಯಾಣಿಸುತ್ತಿದ್ದರು. ರಾತ್ರಿ 11.32ಕ್ಕೆ ಈ ರೈಲು ದಾವಣಗೆರೆಗೆ ಬಂದಿತ್ತು. ಅಂಗವಿಕಲರಾಗಿರುವ ಪ್ರಶಾಂತ್ ರೈಲಿನಿಂದ ಕೆಳಗೆ ಇಳಿಯಲು ಮುಂದಾಗಿದ್ದರು. ಈ ವೇಳೆ ಅವರು ಆಯತಪ್ಪಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಪ್ರಯಾಣಿಕ ಮೆಟ್ಟಿಲಿನಿಂದ ಜಾರುತ್ತಿರುವುದನ್ನು ಗಮನಿಸಿದ ಹೆಡ್ಕಾನ್ಸ್ಟೆಬಲ್ ಸತೀಶ್ ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ಕೆಳಗೆ ಬೀಳುತ್ತಿದ್ದ ಅವರನ್ನು ಹಿಡಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರೂ ಕೈಜೋಡಿಸಿದ್ದಾರೆ. ಘಟನೆಯಿಂದ ಆಘಾತಗೊಂಡಿದ್ದ ಪ್ರಯಾಣಿಕನಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>