ಸೋಮವಾರ ಬಸವನ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಗಾಸೆಯ ಕಲಾ ತಂಡದ ಮೇಳದೊಂದಿಗೆ ವೀರಭದ್ರೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ತಂದು ಗಾಡಿಯಲ್ಲಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ಗಾಡಿಯನ್ನು ಮುಂದಕ್ಕೆ ಎಳೆದುಕೊಂಡು ಹೋಗಲು ಆರಂಭಿಸಿದರು. ದೇವರ ಮೂರ್ತಿ ಇರುವ ಗಾಡಿಯ ಮೇಲೆ ನೆರೆದಿದ್ದ ಭಕ್ತರು ಮಂಡಕ್ಕಿ, ಮೆಣಸು ಹಾಗೂ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಹರಕೆಯನ್ನು ಸಮರ್ಪಿಸಿದರು.