<p><strong>ದಾವಣಗೆರೆ: </strong>ವೀರಶೈವ ಲಿಂಗಾಯತ ಧರ್ಮ ಒಂದೇ ಧರ್ಮವಾಗಿ ಉಳಿಬೇಕೇ ವಿನಃ ಬೇರೆ ಆಗಬಾರದು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ದಾವಣಗೆರೆಯಲ್ಲಿ ಮಾತನಾಡಿದ ಅವರು ‘ಸಮಸ್ತ ಲಿಂಗಾಯತ ಬೇಡಿಕೆ ಇದ್ದರೆ ತಮ್ಮವರೇ ಮುಖ್ಯಮಂತ್ರಿಗಳು, ಹಾಗೂ ಸಚಿವರು ಇದ್ದಾರೆ. ಸಭೆ ಕರೆದು ಅದರ ಸಾಧಕ–ಬಾಧಕಗಳನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಪಂಚಮಸಾಲಿ ಸಮಾಜಕ್ಕೆ ಪ್ರತ್ಯೇಕ ಪೀಠ ಸ್ಥಾಪನೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಇದ್ಯಾವುದು ನನ್ನ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ಎಲ್ಲರ ಜೊತೆ ಮಾತನಾಡುತ್ತೇನೆ’ ಎಂದರು.</p>.<p class="Subhead"><strong>‘ಎಂ.ಬಿ. ಪಾಟೀಲ್ರಿಂದ ಕಾಂಗ್ರೆಸ್ ಸರ್ವನಾಶ’</strong></p>.<p class="Subhead">ಎಂ.ಬಿ. ಪಾಟೀಲ್ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಮಾತನಾಡಿ ಒಮ್ಮೆ ಕೈಸುಟ್ಟುಕೊಂಡಿದ್ದರು, ಇದೀಗ ಮತ್ತೇ ಅದೇ ಧರ್ಮದ ವಿಚಾರವಾಗಿ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಮಾಡಿದಂತೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ವೀರಶೈವ ಲಿಂಗಾಯತ ಧರ್ಮ ಒಂದೇ ಧರ್ಮವಾಗಿ ಉಳಿಬೇಕೇ ವಿನಃ ಬೇರೆ ಆಗಬಾರದು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ದಾವಣಗೆರೆಯಲ್ಲಿ ಮಾತನಾಡಿದ ಅವರು ‘ಸಮಸ್ತ ಲಿಂಗಾಯತ ಬೇಡಿಕೆ ಇದ್ದರೆ ತಮ್ಮವರೇ ಮುಖ್ಯಮಂತ್ರಿಗಳು, ಹಾಗೂ ಸಚಿವರು ಇದ್ದಾರೆ. ಸಭೆ ಕರೆದು ಅದರ ಸಾಧಕ–ಬಾಧಕಗಳನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಪಂಚಮಸಾಲಿ ಸಮಾಜಕ್ಕೆ ಪ್ರತ್ಯೇಕ ಪೀಠ ಸ್ಥಾಪನೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಇದ್ಯಾವುದು ನನ್ನ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ಎಲ್ಲರ ಜೊತೆ ಮಾತನಾಡುತ್ತೇನೆ’ ಎಂದರು.</p>.<p class="Subhead"><strong>‘ಎಂ.ಬಿ. ಪಾಟೀಲ್ರಿಂದ ಕಾಂಗ್ರೆಸ್ ಸರ್ವನಾಶ’</strong></p>.<p class="Subhead">ಎಂ.ಬಿ. ಪಾಟೀಲ್ ಅವರು ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಮಾತನಾಡಿ ಒಮ್ಮೆ ಕೈಸುಟ್ಟುಕೊಂಡಿದ್ದರು, ಇದೀಗ ಮತ್ತೇ ಅದೇ ಧರ್ಮದ ವಿಚಾರವಾಗಿ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಮಾಡಿದಂತೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>