ತಾಲ್ಲೂಕಿನಲ್ಲಿ ನೀರಾವರಿ ಪ್ರದೇಶ ಬಹಳಷ್ಟು ಕಡಿಮೆ ಇದೆ. ನೀರಿನ ಸೌಲಭ್ಯವಿದ್ದರೂ ರೈತರು ಬೇರೆ ಬೆಳೆಗಳತ್ತ ಮುಖಮಾಡಿದ್ದಾರೆ. ಹೀಗಾಗಿ ಸ್ಥಳೀಯವಾಗಿ ತರಕಾರಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗಿದೆ. ಪ್ರತಿ ವರ್ಷದ ಬೇಸಿಗೆ ಸಂದರ್ಭದಲ್ಲಿ ಇಂತಹ ಪರಿಸ್ಥಿತಿ ಸರ್ವೇ ಸಾಮಾನ್ಯ. ಅಲ್ಲದೇ ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಿಂದ ಹರಪನಹಳ್ಳಿ ಮಾರುಕಟ್ಟೆಗೆ ತರಕಾರಿ ಬರುತ್ತಿರುವುದರಿಂದ ದರ ಹೆಚ್ಚಳವಾಗಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಿ ಎಚ್.ಅಶೋಕ.