<p><strong>ಚನ್ನಗಿರಿ</strong>: ದೆಹಲಿಯಲ್ಲಿ ನಡೆದ ಭಯೋತ್ಪಾದಕರ ಕೃತ್ಯ ಖಂಡಿಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ದೇಶವಿರೋಧಿ ಶಕ್ತಿಗಳು ಮತ್ತು ವಿದ್ಯಾವಂತ ಮುಸ್ಲಿಂ ಭಯೋತ್ಪಾದಕರು ದೆಹಲಿಯ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕೇಂದ್ರ ಸರ್ಕಾರ ಅವರನ್ನು ಗಲ್ಲಿಗೇರಿಸಬೇಕು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ದೇಶದ ರಕ್ಷಣೆಗಾಗಿ ಸಂಘ ಪರಿವಾರ ಯಾವ ತ್ಯಾಗಕ್ಕೂ ಸಿದ್ಧವಿದೆ. ಧರ್ಮ ಹಾಗೂ ಸಂಸ್ಕೃತಿ ಉಳಿಸಲು ಇಸ್ರೇಲ್ ಮಾದರಿ ಹೋರಾಟ ಅನಿವಾರ್ಯವಾಗಿದೆ. ಹಿಂದೂ ಸಂಸ್ಕೃತಿ ಉಳಿದರೆ ಮಾತ್ರ ಜಗತ್ತಿಗೆ ಶಾಂತಿ. ಇಲ್ಲದಿದ್ದರೆ ಮನುಕುಲದ ನಾಶಕ್ಕೆ ದಾರಿಯಾಗುತ್ತದೆ ಎಂದು ತಿಳಿಸಿದರು.</p>.<p>ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿಯ ಮೂಲಕ ಸಾಗಿ ತಹಶೀಲ್ದಾರ್ ಕಚೇರಿ ತಲುಪಿತು. ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. </p>.<p>ವಿಎಚ್ಪಿ ಅಧ್ಯಕ್ಷ ಜಯ್ಯಣ್ಣ, ಜಿಲ್ಲಾ ಘಟಕದ ಸಂಚಾಲಕ ಮಂಜುನಾಥ್, ರವಿಚಂದ್ರ, ಶ್ರೀನಿವಾಸ್, ಮಧು, ಚಿಕ್ಕಣ್ಣ, ಕೆ.ಆರ್. ಗೋಪಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ದೆಹಲಿಯಲ್ಲಿ ನಡೆದ ಭಯೋತ್ಪಾದಕರ ಕೃತ್ಯ ಖಂಡಿಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ದೇಶವಿರೋಧಿ ಶಕ್ತಿಗಳು ಮತ್ತು ವಿದ್ಯಾವಂತ ಮುಸ್ಲಿಂ ಭಯೋತ್ಪಾದಕರು ದೆಹಲಿಯ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕೇಂದ್ರ ಸರ್ಕಾರ ಅವರನ್ನು ಗಲ್ಲಿಗೇರಿಸಬೇಕು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ದೇಶದ ರಕ್ಷಣೆಗಾಗಿ ಸಂಘ ಪರಿವಾರ ಯಾವ ತ್ಯಾಗಕ್ಕೂ ಸಿದ್ಧವಿದೆ. ಧರ್ಮ ಹಾಗೂ ಸಂಸ್ಕೃತಿ ಉಳಿಸಲು ಇಸ್ರೇಲ್ ಮಾದರಿ ಹೋರಾಟ ಅನಿವಾರ್ಯವಾಗಿದೆ. ಹಿಂದೂ ಸಂಸ್ಕೃತಿ ಉಳಿದರೆ ಮಾತ್ರ ಜಗತ್ತಿಗೆ ಶಾಂತಿ. ಇಲ್ಲದಿದ್ದರೆ ಮನುಕುಲದ ನಾಶಕ್ಕೆ ದಾರಿಯಾಗುತ್ತದೆ ಎಂದು ತಿಳಿಸಿದರು.</p>.<p>ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿಯ ಮೂಲಕ ಸಾಗಿ ತಹಶೀಲ್ದಾರ್ ಕಚೇರಿ ತಲುಪಿತು. ತಹಶೀಲ್ದಾರ್ ಕೆ.ಆರ್. ರುಕ್ಮಿಣಿಬಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. </p>.<p>ವಿಎಚ್ಪಿ ಅಧ್ಯಕ್ಷ ಜಯ್ಯಣ್ಣ, ಜಿಲ್ಲಾ ಘಟಕದ ಸಂಚಾಲಕ ಮಂಜುನಾಥ್, ರವಿಚಂದ್ರ, ಶ್ರೀನಿವಾಸ್, ಮಧು, ಚಿಕ್ಕಣ್ಣ, ಕೆ.ಆರ್. ಗೋಪಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>