<p><strong>ದಾವಣಗೆರೆ</strong>: ‘ಈ ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ' ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ‘ವೈ.ಎ. ನಾರಾಯಣಸ್ವಾಮಿ ಅವರು ಸತತ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಅವರು ಗೆಲುವು ಸಾಧಿಸಲು ಯಾವುದೇ ತೊಂದರೆ ಇಲ್ಲ. ಆದರೂ ನಾವು ಮೈಮರೆಯಬಾರದು. ಸಂಘಟಿತ ಹೋರಾಟ ಮಾಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಾಗಿದೆ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳ ದರ್ಬಾರ್ ಆಗಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ’ ಎಂದು ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಆರೋಪಿಸಿದರು.</p>.<p>‘ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹಣದಿಂದ ಗೆಲ್ಲಬಹುದು ಎಂಬ ಭ್ರಮೆ ಕಾಂಗ್ರೆಸ್ಗೆ ಇದೆ. ಅದು ಸಾಧ್ಯವಾಗುವುದಿಲ್ಲ. ಏಕೆಂದರೆ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಶಿಕ್ಷಕರ ಸ್ಪಂದನೆಗೆ ಸಾಕಷ್ಟು ಶ್ರಮಿಸಿದ್ದೇನೆ’ ಎಂದರು.</p>.<p>‘ಕಾಂಗ್ರೆಸ್ ಸರ್ಕಾರ ಬಂದ ನಂತರ ಶಿಕ್ಷಕರು ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸರಿಯಾದ ಸಮಯಕ್ಕೆ ಸಂಬಳ, ರಜೆ, ಭತ್ಯೆಗಳು ಇಲ್ಲದಂತಾಗಿವೆ’ ಎಂದು ಆರೋಪಿಸಿದರು.</p>.<p>ಮಾಜಿ ಶಾಸಕ ಪ್ರೊ. ಎನ್. ಲಿಂಗಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ವಿಧಾನಪರಿಷತ್ ಸದಸ್ಯ ನವೀನ್, ಭಾನುವಳ್ಳಿ ಅಣ್ಣಪ್ಪ, ರಾಮ್ ರೆಡ್ಡಿ, ಸಾಂಬಶಿವಯ್ಯ ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಈ ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ' ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ‘ವೈ.ಎ. ನಾರಾಯಣಸ್ವಾಮಿ ಅವರು ಸತತ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಅವರು ಗೆಲುವು ಸಾಧಿಸಲು ಯಾವುದೇ ತೊಂದರೆ ಇಲ್ಲ. ಆದರೂ ನಾವು ಮೈಮರೆಯಬಾರದು. ಸಂಘಟಿತ ಹೋರಾಟ ಮಾಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಾಗಿದೆ’ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳ ದರ್ಬಾರ್ ಆಗಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ’ ಎಂದು ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಆರೋಪಿಸಿದರು.</p>.<p>‘ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹಣದಿಂದ ಗೆಲ್ಲಬಹುದು ಎಂಬ ಭ್ರಮೆ ಕಾಂಗ್ರೆಸ್ಗೆ ಇದೆ. ಅದು ಸಾಧ್ಯವಾಗುವುದಿಲ್ಲ. ಏಕೆಂದರೆ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಶಿಕ್ಷಕರ ಸ್ಪಂದನೆಗೆ ಸಾಕಷ್ಟು ಶ್ರಮಿಸಿದ್ದೇನೆ’ ಎಂದರು.</p>.<p>‘ಕಾಂಗ್ರೆಸ್ ಸರ್ಕಾರ ಬಂದ ನಂತರ ಶಿಕ್ಷಕರು ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸರಿಯಾದ ಸಮಯಕ್ಕೆ ಸಂಬಳ, ರಜೆ, ಭತ್ಯೆಗಳು ಇಲ್ಲದಂತಾಗಿವೆ’ ಎಂದು ಆರೋಪಿಸಿದರು.</p>.<p>ಮಾಜಿ ಶಾಸಕ ಪ್ರೊ. ಎನ್. ಲಿಂಗಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ವಿಧಾನಪರಿಷತ್ ಸದಸ್ಯ ನವೀನ್, ಭಾನುವಳ್ಳಿ ಅಣ್ಣಪ್ಪ, ರಾಮ್ ರೆಡ್ಡಿ, ಸಾಂಬಶಿವಯ್ಯ ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>