<p><strong>ದಾವಣಗೆರೆ: </strong>ನಟ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಗುರುವಾರ ಇಲ್ಲಿನ ಅಶೋಕ ಚಿತ್ರಮಂದಿರ, ತ್ರಿನೇತ್ರ ಚಿತ್ರಮಂದಿರ ಹಾಗೂ ಮೂವಿಟೈಮ್ ಮಲ್ಟಿಪ್ಲೆಕ್ಸ್ನಲ್ಲಿ ಬಿಡುಗಡೆಗೊಂಡಿದೆ. ಮೂರೂ ಕಡೆಗಳಲ್ಲಿ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಚಿತ್ರ ನೋಡಲು ಆಗಮಿಸಿದ್ದು ನೂಕುನುಗ್ಗಲು ಉಂಟಾಗಿದೆ.</p>.<p>ಕಿಚ್ಚ ಸುದೀಪ್ ಜತೆಗೆ ನಿರೂಪ್ ಭಂಡಾರಿ, ಚಿತ್ಕಳಾ ಬಾರಾದಾರ್, ನೀತಾ ಅಶೋಕ್ ಸಂಹಿತಾ ಮುಂತಾದವರು ನಟಿಸಿರುವ ಈ ಚಿತ್ರ ಬಿಡಗಡೆಗೆ ಮುಂಚೆಯೇ ಭಾರಿ ಪ್ರಚಾರ ಪಡೆದಿರುವುದರಿಂದ ಬಿಡುಗಡೆಗಾಗಿ ಕಿಚ್ಚ ಅಭಿಮಾನಿಗಳು ಕಾದು ಕುಳಿತಿದ್ದರು. ಎರಡು ದಿನಗಳ ಮುಂಚೆಯೇ ಆನ್ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ಗುರುವಾರ ಚಿತ್ರಮಂದಿರಗಳಿಗೆ ಬಂದಿದ್ದರು.</p>.<p>ಚಿತ್ರಮಂದಿರಗಳ ಆವರಣದಲ್ಲಿ ಬಾನೆತ್ತರದ ಕಟೌಟ್ಗಳು ನಿಲ್ಲಿಸಿ ಹೂವಿನ ಹಾರಗಳನ್ನು ಹಾಕಲಾಗಿತ್ತು. ಪರದೆಯ ಮೇಲೆ ಸುದೀಪ್ ಕಾಣಿಸುತ್ತಿದ್ದಂತೆ ಶಿಳ್ಳೆಗಳು ಹೊಡೆದು ಅಭಿಮಾನ ಪ್ರದರ್ಶಿಸಿದರು. ಚಿತ್ರಮಂದಿರದ ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಟ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಗುರುವಾರ ಇಲ್ಲಿನ ಅಶೋಕ ಚಿತ್ರಮಂದಿರ, ತ್ರಿನೇತ್ರ ಚಿತ್ರಮಂದಿರ ಹಾಗೂ ಮೂವಿಟೈಮ್ ಮಲ್ಟಿಪ್ಲೆಕ್ಸ್ನಲ್ಲಿ ಬಿಡುಗಡೆಗೊಂಡಿದೆ. ಮೂರೂ ಕಡೆಗಳಲ್ಲಿ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಚಿತ್ರ ನೋಡಲು ಆಗಮಿಸಿದ್ದು ನೂಕುನುಗ್ಗಲು ಉಂಟಾಗಿದೆ.</p>.<p>ಕಿಚ್ಚ ಸುದೀಪ್ ಜತೆಗೆ ನಿರೂಪ್ ಭಂಡಾರಿ, ಚಿತ್ಕಳಾ ಬಾರಾದಾರ್, ನೀತಾ ಅಶೋಕ್ ಸಂಹಿತಾ ಮುಂತಾದವರು ನಟಿಸಿರುವ ಈ ಚಿತ್ರ ಬಿಡಗಡೆಗೆ ಮುಂಚೆಯೇ ಭಾರಿ ಪ್ರಚಾರ ಪಡೆದಿರುವುದರಿಂದ ಬಿಡುಗಡೆಗಾಗಿ ಕಿಚ್ಚ ಅಭಿಮಾನಿಗಳು ಕಾದು ಕುಳಿತಿದ್ದರು. ಎರಡು ದಿನಗಳ ಮುಂಚೆಯೇ ಆನ್ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ಗುರುವಾರ ಚಿತ್ರಮಂದಿರಗಳಿಗೆ ಬಂದಿದ್ದರು.</p>.<p>ಚಿತ್ರಮಂದಿರಗಳ ಆವರಣದಲ್ಲಿ ಬಾನೆತ್ತರದ ಕಟೌಟ್ಗಳು ನಿಲ್ಲಿಸಿ ಹೂವಿನ ಹಾರಗಳನ್ನು ಹಾಕಲಾಗಿತ್ತು. ಪರದೆಯ ಮೇಲೆ ಸುದೀಪ್ ಕಾಣಿಸುತ್ತಿದ್ದಂತೆ ಶಿಳ್ಳೆಗಳು ಹೊಡೆದು ಅಭಿಮಾನ ಪ್ರದರ್ಶಿಸಿದರು. ಚಿತ್ರಮಂದಿರದ ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>