ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ನವಿಲೇಹಾಳ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ಲಂಚ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿಗೆ ಎರಡು ವರ್ಷ ಶಿಕ್ಷೆ ಹಾಗೂ ₹ 20 ಸಾವಿರ ದಂಡವನ್ನು ದಾವಣಗೆರೆ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ವಿಧಿಸಿ ಸೋಮವಾರ ಆದೇಶಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಸಹಾಯಕ ಜಗದೀಶ್ಗೆ ಒಂದು ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡವನ್ನೂ ವಿಧಿಸಲಾಗಿದೆ.
2010ರಲ್ಲಿ ನವಿಲೇಹಾಳ ಗ್ರಾಮದ ಗೋವರ್ಧನ ಗಿರಿಶ್ಯಾಮ್ ಅವರಿಗೆ ವಾರಸಾ ಪ್ರಮಾಣಪತ್ರ ನೀಡಲು ₹ 2,000 ಲಂಚ ಪಡೆಯುತ್ತಿದ್ದಾಗ ಅಪರಾಧಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. 2012ರಲ್ಲಿ ಪ್ರಕರಣವುನ್ಯಾಯಾಲಯದಲ್ಲಿ ದಾಖಲಾಗಿತ್ತು.
ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಅಭಿಯೋಜಕ ಪಿ.ವೈ. ಹಾದಿಮನಿ ಅವರು ವಾದ ಮಂಡಿಸಿದ್ದರು.