<p><strong>ಆರುಂಡಿ (ನ್ಯಾಮತಿ):</strong> ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದ ಜಮೀನುಗಳಲ್ಲಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತ್ತು ಯುವ ಸಂಘಟನೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ಗಳಿಂದ ಗ್ರಾಮಸ್ಥರ ನೆಮ್ಮದಿ ಹಾಳಾಗಿದೆ. ರಸ್ತೆಗಳು ಮತ್ತು ಜಮೀನುಗಳಲ್ಲಿ ಮಣ್ಣಿನ ಸವೆತ ಉಂಟಾಗಿದೆ. ಸಿಡಿಮದ್ದು ಸ್ಫೋಟದಿಂದ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಅಂತರ್ಜಲ ಬತ್ತಿ ಹೋಗಿದೆ. ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಯುವಕರು ಕ್ರಷರ್ ಹಾಗೂ ಜೆಸಿಬಿ ಯಂತ್ರಗಳನ್ನು ತಡೆದು ನಿಲ್ಲಿಸಿದರು. ಗಣಿಗಾರಿಕೆ ಅನುಮತಿ, ಸರ್ಕಾರದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದರು. </p>.<p>ಗ್ರಾಮಸ್ಥರ ಅಹವಾಲನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿಕೊಡುವುದಾಗಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಭರವಸೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೂ ಗಣಿಗಾರಿಕೆ ಸ್ಥಗಿತಗೊಳಿಸಲಾಗುವುದು ಎಂದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ, ಬೆಳಗುತ್ತಿ ಕಂದಾಯ ನಿರೀಕ್ಷಕ ಎಂ.ಪಿ. ವೃಷಭೇಂದ್ರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆರುಂಡಿ (ನ್ಯಾಮತಿ):</strong> ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದ ಜಮೀನುಗಳಲ್ಲಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತ್ತು ಯುವ ಸಂಘಟನೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ಗಳಿಂದ ಗ್ರಾಮಸ್ಥರ ನೆಮ್ಮದಿ ಹಾಳಾಗಿದೆ. ರಸ್ತೆಗಳು ಮತ್ತು ಜಮೀನುಗಳಲ್ಲಿ ಮಣ್ಣಿನ ಸವೆತ ಉಂಟಾಗಿದೆ. ಸಿಡಿಮದ್ದು ಸ್ಫೋಟದಿಂದ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಅಂತರ್ಜಲ ಬತ್ತಿ ಹೋಗಿದೆ. ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮದ ಯುವಕರು ಕ್ರಷರ್ ಹಾಗೂ ಜೆಸಿಬಿ ಯಂತ್ರಗಳನ್ನು ತಡೆದು ನಿಲ್ಲಿಸಿದರು. ಗಣಿಗಾರಿಕೆ ಅನುಮತಿ, ಸರ್ಕಾರದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದರು. </p>.<p>ಗ್ರಾಮಸ್ಥರ ಅಹವಾಲನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿಕೊಡುವುದಾಗಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಭರವಸೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೂ ಗಣಿಗಾರಿಕೆ ಸ್ಥಗಿತಗೊಳಿಸಲಾಗುವುದು ಎಂದರು.</p>.<p>ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ, ಬೆಳಗುತ್ತಿ ಕಂದಾಯ ನಿರೀಕ್ಷಕ ಎಂ.ಪಿ. ವೃಷಭೇಂದ್ರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>