<p><strong>ಹಿರೇಮಳಲಿ (ಚನ್ನಗಿರಿ):</strong> ‘ತಾಲ್ಲೂಕಿನ ಹಿರೇಮಳಲಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿರುವ ಮದ್ಯದ ಅಂಗಡಿಯನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. </p>.<p>ನಾಲ್ಕು ವರ್ಷದ ಹಿಂದೆ ಗ್ರಾಮದ ಜಿಲ್ಲಾ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಮದ್ಯದ ಅಂಗಡಿ ತೆರೆಯಲಾಗಿದೆ. ಆದರೆ ಇದರ ಮುಂದೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 9 ಜನ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಅಬಕಾರಿ ಇಲಾಖೆಯ ನಿಯಮದ ಪ್ರಕಾರ ರಸ್ತೆ ಬದಿಯಿಂದ 100 ಮೀಟರ್ ದೂರದಲ್ಲಿ ಮದ್ಯದ ಅಂಗಡಿ ಇರಬೇಕು. ಆದರೆ ಈ ಗ್ರಾಮದಲ್ಲಿ ನಿಯಮವನ್ನು ಮೀರಿ ರಸ್ತೆ ಬದಿಗೆ ಹೊಂದಿಕೊಂಡಂತೆ ಮದ್ಯದ ಅಂಗಡಿ ತೆರೆಯಲಾಗಿದೆ. ನಿಯಮ ಉಲ್ಲಂಘನೆಯಾಗಿದ್ದರೂ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎನ್.ಜೆ. ನಾಗರಾಜ್, ‘ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗುವುದು. ಮದ್ಯದಂಗಡಿ ಸ್ಥಳಾಂತರಕ್ಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ರೈತ ಸಂಘದ ಮುಖಂಡರಾದ ಚನ್ನಬಸಪ್ಪ, ದಾಗಿನಕಟ್ಟೆ ಬಸವರಾಜ್, ಕಲೀಂಮುಲ್ಲಾ, ಹನುಮಂತಪ್ಪ, ಓಂಕಾರಪ್ಪ, ತಿಪ್ಪೇಸ್ವಾಮಿ, ನೇತ್ರಮ್ಮ, ಆಶಾ, ನಾಗರಾಜ್, ಸಂತೋಷ್ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಮಳಲಿ (ಚನ್ನಗಿರಿ):</strong> ‘ತಾಲ್ಲೂಕಿನ ಹಿರೇಮಳಲಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿರುವ ಮದ್ಯದ ಅಂಗಡಿಯನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. </p>.<p>ನಾಲ್ಕು ವರ್ಷದ ಹಿಂದೆ ಗ್ರಾಮದ ಜಿಲ್ಲಾ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಮದ್ಯದ ಅಂಗಡಿ ತೆರೆಯಲಾಗಿದೆ. ಆದರೆ ಇದರ ಮುಂದೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 9 ಜನ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಅಬಕಾರಿ ಇಲಾಖೆಯ ನಿಯಮದ ಪ್ರಕಾರ ರಸ್ತೆ ಬದಿಯಿಂದ 100 ಮೀಟರ್ ದೂರದಲ್ಲಿ ಮದ್ಯದ ಅಂಗಡಿ ಇರಬೇಕು. ಆದರೆ ಈ ಗ್ರಾಮದಲ್ಲಿ ನಿಯಮವನ್ನು ಮೀರಿ ರಸ್ತೆ ಬದಿಗೆ ಹೊಂದಿಕೊಂಡಂತೆ ಮದ್ಯದ ಅಂಗಡಿ ತೆರೆಯಲಾಗಿದೆ. ನಿಯಮ ಉಲ್ಲಂಘನೆಯಾಗಿದ್ದರೂ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎನ್.ಜೆ. ನಾಗರಾಜ್, ‘ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗುವುದು. ಮದ್ಯದಂಗಡಿ ಸ್ಥಳಾಂತರಕ್ಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ರೈತ ಸಂಘದ ಮುಖಂಡರಾದ ಚನ್ನಬಸಪ್ಪ, ದಾಗಿನಕಟ್ಟೆ ಬಸವರಾಜ್, ಕಲೀಂಮುಲ್ಲಾ, ಹನುಮಂತಪ್ಪ, ಓಂಕಾರಪ್ಪ, ತಿಪ್ಪೇಸ್ವಾಮಿ, ನೇತ್ರಮ್ಮ, ಆಶಾ, ನಾಗರಾಜ್, ಸಂತೋಷ್ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>