<p><strong>ತ್ಯಾವಣಿಗೆ:</strong> ಗ್ರಾಮದಲ್ಲಿ ಬೇಸಿಗೆ ಆರಂಭಕ್ಕೂ ಮೊದಲೆ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.</p>.<p>ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾದ ಕಾರಣ ನೀರಿನ ಸಮಸ್ಯೆಯುಂಟಾಗಿದೆ. ಪ್ರತಿ ವರ್ಷ ಬೇಸಿಗೆಯಲ್ಲಿ ಈ ಸಮಸ್ಯೆಯುಂಟಾಗುತ್ತಿದ್ದು, ಗ್ರಾ.ಪಂ. ಆಡಳಿತ ಇದಕ್ಕೆ ಪರಿಹಾರ ಕ್ರಮ ಕೈಗೊಂಡಿಲ್ಲ. ಈಗ ನಾಲ್ಕೈದು ದಿಗಳಿಗೊಮ್ಮೆ ನೀರು ಬಿಡುತ್ತಿದ್ದು, ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರಿದರು.</p>.<p>ನೀರಿನ ಸಮಸ್ಯೆಗೆ ಸ್ಥಳೀಯ ಆಡಳಿತ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಸಮಸ್ಯೆಯುಂಟಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಗ್ರಾಮದಲ್ಲಿ 8 ರಿಂದ 10 ಕೊಳವೆಬಾವಿಗಳಿದ್ದು, 4 ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಎಂದು ಪಿಡಿಒ ಶರಣಪ್ಪ ಮಲವನಶೆಟ್ಟಿ ತಿಳಿಸಿದರು.</p>.<p>ಗ್ರಾಮಸ್ಥರಿಗೆ ನೀರಿನ ಸಮಸ್ಯೆಯಾಗದಂತೆ ನಾಲ್ಕೈದು ದಿನಗಳಿಂದ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಸೂಳೆಕೆರೆಯಿಂದ ನೀರು ತರಲು ಅಧಿಕಾರಿಗಳಿಗೆ ಮನವಿ ಮಾಡಿದ್ದು, ಮೋಟರ್ ಸುಟ್ಟಿರುವ ಕಾರಣ ನೀರು ತರಿಸುವುದು ತಡವಾಗಿದೆ ಎಂದು ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾವಣಿಗೆ:</strong> ಗ್ರಾಮದಲ್ಲಿ ಬೇಸಿಗೆ ಆರಂಭಕ್ಕೂ ಮೊದಲೆ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.</p>.<p>ಕೊಳವೆಬಾವಿಗಳಲ್ಲಿ ನೀರು ಕಡಿಮೆಯಾದ ಕಾರಣ ನೀರಿನ ಸಮಸ್ಯೆಯುಂಟಾಗಿದೆ. ಪ್ರತಿ ವರ್ಷ ಬೇಸಿಗೆಯಲ್ಲಿ ಈ ಸಮಸ್ಯೆಯುಂಟಾಗುತ್ತಿದ್ದು, ಗ್ರಾ.ಪಂ. ಆಡಳಿತ ಇದಕ್ಕೆ ಪರಿಹಾರ ಕ್ರಮ ಕೈಗೊಂಡಿಲ್ಲ. ಈಗ ನಾಲ್ಕೈದು ದಿಗಳಿಗೊಮ್ಮೆ ನೀರು ಬಿಡುತ್ತಿದ್ದು, ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರಿದರು.</p>.<p>ನೀರಿನ ಸಮಸ್ಯೆಗೆ ಸ್ಥಳೀಯ ಆಡಳಿತ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಸಮಸ್ಯೆಯುಂಟಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಗ್ರಾಮದಲ್ಲಿ 8 ರಿಂದ 10 ಕೊಳವೆಬಾವಿಗಳಿದ್ದು, 4 ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಎಂದು ಪಿಡಿಒ ಶರಣಪ್ಪ ಮಲವನಶೆಟ್ಟಿ ತಿಳಿಸಿದರು.</p>.<p>ಗ್ರಾಮಸ್ಥರಿಗೆ ನೀರಿನ ಸಮಸ್ಯೆಯಾಗದಂತೆ ನಾಲ್ಕೈದು ದಿನಗಳಿಂದ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಸೂಳೆಕೆರೆಯಿಂದ ನೀರು ತರಲು ಅಧಿಕಾರಿಗಳಿಗೆ ಮನವಿ ಮಾಡಿದ್ದು, ಮೋಟರ್ ಸುಟ್ಟಿರುವ ಕಾರಣ ನೀರು ತರಿಸುವುದು ತಡವಾಗಿದೆ ಎಂದು ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>